ನವದೆಹಲಿ : ಇಂದು ಅಯೋಧ್ಯೆ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಂಬಿಕೆ ಹಾಗೂ ವಿಶ್ವಾಸದಿಂದ ಕೂಡಿದಂತ ತೀರ್ಪಾಗಿದೆ. ಇದು ಯಾವುದೇ ಒಂದು ಗುಂಪಿನ ಪರವಾಗಿ ಬಂದಿರುವ ತೀರ್ಪಲ್ಲ. ಇದು ಸರ್ವ ಧರ್ಮಕ್ಕೂ ಸಂದ ಗೆಲುವಾಗಿದೆ. ಇಂತಹ ತೀರ್ಪನ್ನು ಕಾಂಗ್ರೆಸ್ ಒಪ್ಪಿಕೊಳ್ಳುತ್ತಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ನವದೆಹಲಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮ ಧರ್ಮ ಸಹಿಷ್ಣುತೆಗೆ ಹೆಸರು ವಾಸಿಯಾಗಿದ್ದನು. ವಚನ ಪಾಲನೆ ಹಾಗೂ ತ್ಯಾಗಕ್ಕೂ ಹೆಸರುವಾಸಿ. ಇಂತಹ ರಾಮನ ಮಂದಿರದ ಬಗ್ಗೆ ಉಂಟಾಗಿದ್ದ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದು ಸ್ವಾಗತಾರ್ಹವಾಗಿದೆ. ಇದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಹೇಳಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಇಂದು ಸುಪ್ರೀಂ ಕೋರ್ಟ್ ನೀಡಿರುವಂತ ತೀರ್ಪು ಯಾರದ್ದೋ ಒಂದು ಗುಂಪಿನ ಗೆಲುವಾಗಿಲ್ಲ. ಇದು ಸರ್ವ ಧರ್ಮಕ್ಕೂ ಸಂದ ಗೆಲುವಾಗಿದೆ. ಇಂತಹ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುವುದಲ್ಲದೇ, ರಾಮ ಮಂದಿರ ನಿರ್ಮಾಣಕ್ಕಾಗಿ ಬೆಂಬಲವನ್ನೂ ನೀಡುತ್ತಿದೆ ಎಂದು ಪ್ರಕಟಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…