ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ ನೀಡಲಾಗುತ್ತಿದೆ.
ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಮಾನದ ಸಂತರ ಸಮಾವೇಶದಲ್ಲಿ ಈ ಘೋಷಣೆ ಮಾಡಲಾಯಿತು. ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ ಎಂಬ ಸಂಕಲ್ಪದಿಂದ ಹಣ ನೀಡೋಣ. ಸರ್ಕಾರದ ಅನುದಾನ, ಶ್ರೀಮಂತರ ದುಡ್ಡಿನಿಂದ ಶ್ರೀರಾಮ ಮಂದಿರ ನಿರ್ಮಾಣವಾಗೋದು ಬೇಡ ಎಂಬುದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೇರಿದಂತೆ ಪ್ರತಿಯೊಬ್ಬರ ಆಶಯ. ದೇಶದ ಪ್ರತಿಯೊಬ್ಬ ಭಾರತೀಯ ಹಿಂದೂ ಸಮರ್ಪಿಸುವ ನಿಧಿಯಿಂದ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದೇ ಎಲ್ಲರ ಆಶಯ. ಇದನ್ನು ಪೂರೈಸಲು ಎಲ್ಲರೂ ಕೈಜೋಡಿಸೋಣ ಎಂದು ಸಮಾವೇಶದಲ್ಲಿ ನೆರೆದಿದ್ದ ಸಂತರು ಒಕ್ಕೊರಲಿನಿಂದ ಪ್ರತಿಪಾದಿಸಿದರು.
ನಿಧಿ ಸಮರ್ಪಣ ಅಭಿಯಾನ ಪ್ರತಿ ಹಳ್ಳಿಗೂ ಬಂದ ಸಂದರ್ಭದಲ್ಲಿ ಆಯಾ ಭಾಗದ ಮಠಾಧೀಶರೇ ಜನರ ಬಳಿ ತೆರಳಿ ನಿಧಿ ಸಂಗ್ರಹಿಸಿ ಕೊಡಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಸಮಾವೇಶದಲ್ಲಿ ಹೇಳಿದರು. ಸುತ್ತೂರು ಶ್ರೀಗಳ ಹೇಳಿಕೆಗೆ ಸಮಾವೇಶದಲ್ಲಿ ಉಪಸ್ಥಿತರಿದ್ದ ಎಲ್ಲ ಮಠಾಧೀಶರು ಸಹಮತ ವ್ಯಕ್ತಪಡಿಸಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…