Featured

ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಇಲ್ಲ, ನಿರ್ಮಾಣದ ಹೆಸರಿನಲ್ಲಿ ‌ಹಣ ದುರ್ಬಳಕೆಗೆ ಮಾತ್ರ ವಿರೋಧವಿದೆ : HDK -Vishwanews24

ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಇಲ್ಲ, ನಿರ್ಮಾಣದ ಹೆಸರಿನಲ್ಲಿ ‌ಹಣ ದುರ್ಬಳಕೆಗೆ ಮಾತ್ರ ವಿರೋಧವಿದೆ : HDK -Vishwanews24

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಥವಾ ಅದಕ್ಕೆ ಅಧಿಕೃತವಾಗಿ ದೇಣಿಗೆ ಸಂಗ್ರಹಕ್ಕೆ ತಮ್ಮ ವಿರೋಧ ಇಲ್ಲ.‌ ರಾಮ ಮಂದಿರ‌ ನಿರ್ಮಾಣದ ಹೆಸರಿನಲ್ಲಿ ‌ಹಣ ದುರ್ಬಳಕೆಗೆ ಮಾತ್ರ ವಿರೋಧವಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಶಿವಮೊಗ್ಗದಲ್ಲಿ ನೀಡಿದ ಹೇಳಿಕೆ ಕುರಿತು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬೀದಿ ಬೀದಿಯಲ್ಲಿ ಹಣ ಸಂಗ್ರಹ ನಡೆಯುತ್ತಿದೆ. ಇದಕ್ಕೆ ಯಾರು ಹೊಣೆ ಮತ್ತು ಲೆಕ್ಕ ಕೊಡುವವರು ಯಾರು ಎಂಬುದು ನನ್ನ ಪ್ರಶ್ನೆ’ ಎಂದರು.

ದೇಣಿಗೆ ಕೊಡದವರ ಮನೆಗಳಿಗೆ ಸ್ಟಿಕ್ಕರ್ ಅಂಟಿಸುತ್ತಿರುವುದನ್ನು  ಒಪ್ಪಿಕೊಂಡಿದ್ದಾರೆ. ದೇಣಿಗೆ ಕೊಡುವಂತೆ ಜನರನ್ನು ಪ್ರೇರೇಪಿಸಬೇಕೆಂಬ ಉದ್ದೇಶವಿದ್ದರೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಲಿ. ಮನೆಗೆ ಏಕೆ ಸ್ಟಿಕ್ಕರ್ ಅಂಟಿಸಬೇಕು ಎಂದು ಕೇಳಿದರು.

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

ಪೋಲಿ, ಪುಂಡರೆಲ್ಲ ವಿಶ್ವ ಹಿಂದೂ ಪರಿಷತ್ ಸದಸ್ಯರು ಎಂದು ಹೇಳಿಕೊಂಡು ಬೀದಿ, ಬೀದಿಗಳಲ್ಲಿ ರಾಮ ಮಂದಿರದ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದಾರೆ. ಹೀಗೆ ಹಣ ವಸೂಲಿಗೆ ಸರ್ಕಾರದ ಅನುಮತಿ ಇದೆಯೆ? ಹಣ ಸಂಗ್ರಹಿಸುವ ವ್ಯಕ್ತಿಗಳಿಗೆ ವಿಶ್ವ ಹಿಂದೂ ಪರಿಷತ್ ಗುರುತಿನ ಚೀಟಿ ನೀಡಿದೆಯೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

‘ಹಣ ದುರ್ಬಳಕೆ ಆಗದಂತೆ ತಡೆಯಿರಿ ಎಂದು ಕೇಳುವುದು ಅಪರಾಧವೆ? 1989ರಲ್ಲಿ ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಿದ ಹಣ, ಇಟ್ಟಿಗೆ, ಸ್ಟೀಲ್ ಪ್ರಮಾಣ ಎಷ್ಟು? ಅದು ಏನಾಯಿತು? ಎಂಬ ಮಾಹಿತಿ ಈವರೆಗೂ ಹೊರಬಂದಿಲ್ಲ. ಮತ್ತೆ ಅದೇ ರೀತಿ ಆಗಬಾರದು ಎಂಬುದು ತಮ್ಮ ಉದ್ದೇಶ’ ಎಂದರು.

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

‘ಮೂರು ಜನರು ನನ್ನ ಮನೆಗೂ ದೇಣಿಗೆ ಸಂಗ್ರಹಕ್ಕೆ ಬಂದಿದ್ದರು. ದೇಣಿಗೆ ಕೊಡದಿರುವುದಕ್ಕೆ ಬೆದರಿಕೆಯ ಧಾಟಿಯಲ್ಲಿ ಮಾತನಾಡಬಾರದು. ಸಾಮಾನ್ಯ ಜನರ ಜತೆ ಈ ರೀತಿ ಚೆಲ್ಲಾಟ ಆಡಬಾರದು. ಧರ್ಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಬಾರದು’ ಎಂದು ಹೇಳಿದರು.

ನಮ್ಮ ಪಕ್ಷದ ಹಲವಾರು ಮಂದಿ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಅಧಿಕೃತ ವ್ಯಕ್ತಿಗಳು ಅಥವಾ ಅವರ ಅಧಿಕೃತ ಪ್ರತಿನಿಧಿಗಳು ಸಂಪರ್ಕಿಸಿದರೆ ದೇಣಿಗೆ ನೀಡಲು ಸಿದ್ಧ ಎಂದು ತಿಳಿಸಿದರು.

ನಾಝಿ ಸಂಸ್ಕೃತಿ ‌ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಕೃತಿ ಒಂದೇ ಎಂಬುದು ಇತಿಹಾಸ ತಜ್ಞರ ಅಭಿಪ್ರಾಯ. ಅದನ್ನೇ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದ್ದೇನೆ. ಆರ್ ಎಸ್ ಎಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಘಟನೆಯೆ? ದೇಶಕ್ಕಾಗಿ ಶ್ರಮಿಸಿದ ಜನರ ಬಗ್ಗೆ ಈ ಸಂಘಟನೆ ಹೇಗೆಲ್ಲಾ ಅಪಪ್ರಚಾರ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

3 hours ago