ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಭರ್ಜರಿಯಾಗಿ ಸಿಂಗಾರಗೊಂಡಿದೆ ಅಯೋಧ್ಯೆ -Vishwanews24

ಲಕ್ನೋ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಇನ್ನು ಎರಡು ದಿನ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ.

ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಯ ಐತಿಹಾಸಿಕ ಕ್ಷಣಕ್ಕಾಗಿ ರಾಮ ಮಂದಿರ ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ. ಪುರುಷೋತ್ತಮ ರಾಮನ ಮಂದಿರಕ್ಕಾಗಿ ಅಯೋಧ್ಯೆ ಭರ್ಜರಿಯಾಗಿ ಅಲಂಕೃತಗೊಂಡಿದೆ. ಭಾರೀ ಭದ್ರತೆಯನ್ನು ಸಹ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.

ಮುಖ್ಯವೇದಿಕೆಯಲ್ಲಿ ಐವರಿಗೆ ಮಾತ್ರ ಸ್ಥಾನ ಕಲ್ಪಿಸಲಾಗುತ್ತಿದೆ. ಪ್ರಧಾನಿ ಮೋದಿ, ರಾಮಜನ್ಮಭೂಮಿ ನ್ಯಾಸ್ ಮುಖ್ಯಸ್ಥ ನೃತ್ಯ ಗೋಪಾಲದಾಸ್, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿದಂತೆ ಒಟ್ಟು ಐವರಷ್ಟೇ ವೇದಿಕೆ ಅಲಂಕರಿಸಲಿದ್ದಾರೆ. ಭದ್ರತಾ ಕಾರಣಗಳಿಂದಾಗಿ 200 ಗಣ್ಯರ ಬದಲಿಗೆ 170 ಗಣ್ಯರಿಗೆ ಅವಕಾಶ ನೀಡಲಾಗಿದೆ. ಮಂದಿರದ ಕನಸು ಕಂಡಿದ್ದ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗಿಯಾಗಲಿದ್ದಾರೆ.

ಬರೋಬ್ಬರಿ 15 ಪೀಳಿಗೆಯಿಂದ ದೇಶ ಹಾಗೂ ವಿದೇಶಗಳಲ್ಲಿ 131 ದೇವಾಲಯಗಳ ವಿನ್ಯಾಸ ಮಾಡಿರುವ ಅಹಮದಾಬಾದ್‍ನ ಖ್ಯಾತ ಶಿಲ್ಪಿ ಚಂದ್ರಕಾಂತ್ ಸೋಂಪುರ ನೇತೃತ್ವದಲ್ಲಿ ಅವರ ಕುಟುಂಬ ಎಲ್ಲ ಕಾಲಕ್ಕೂ ಸಲ್ಲುವ, ಭವ್ಯ ರಾಮ ಮಂದಿರ ನಿರ್ಮಿಸಲಿದೆ.ನಾಗರ ಶೈಲಿಯಲ್ಲಿ ಮರ್ಯಾದ ಪುರುಷೋಷತ್ತಮ ಮಂದಿರ ನಿರ್ಮಾಣವಾಗಲಿದೆ. ಈ ಮೊದಲು 270 ಅಡಿ ಉದ್ದ, 145 ಅಡಿ ಅಗಲ, 141 ಅಡಿ ಎತ್ತರದ ಮಂದಿರ ನಿರ್ಮಿಸಲು ಯೋಜಿಸಲಾಗಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ರಾಮಮಂದಿರ ಬರೋಬ್ಬರಿ 360 ಅಡಿ ಉದ್ದ, 235 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ.

ರಾಮ ಮಂದಿರದ ತಳಭಾಗ 25 ಅಡಿ ಇರಲಿದೆ. ಅದರ ಮೇಲೆ ಡಿಸೈನ್‍ನಲ್ಲಿ 6 ಅಡಿ ಆವರಣ ಇರಲಿದೆ. 16.03 ಅಡಿ ಎತ್ತರದ ಒಟ್ಟು 366 ಸ್ಥಂಭಗಳನ್ನು ಮಂದಿರ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ನೆಲಮಹಡಿಯಲ್ಲಿ 161 ಸ್ಥಂಭ ಇರಲಿದ್ದು, ಇಲ್ಲಿಯೇ ರಾಮನ ಮೂರ್ತಿ ನಿರ್ಮಾಣ ಮಾಡಲಾಗುತ್ತದೆ. ಮೊದಲ ಅಂತಸ್ತಿನಲ್ಲಿ ರಾಮ್‍ಲಲ್ಲಾನ ಗರ್ಭಗುಡಿ ಇರಲಿದೆ. ಇದು ಅಷ್ಟಭುಜಾಕೃತಿಯಲ್ಲಿ ಇರಲಿದೆ. ಇದರ ಪಕ್ಕದಲ್ಲೇ ರಾಮ್ ದರ್ಬಾರ್ ಪ್ರಾಂಗಣ, ಇದರ ಎಡಭಾಗದಲ್ಲಿ ನೃತ್ಯ ಮಂಟಪ, ಅದರ ಹಿಂಬದಿಯಲ್ಲಿ ರಂಗಮಂಟಪ ಇರಲಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago