Featured

ರಾಮ ರಾಜ್ಯ ಕನಸು ಕಾಂಗ್ರೆಸ್ ಗ್ಯಾರಂಟಿಗಳಿಂದ ನನಸು : ಡಿಕೆ ಶಿವಕುಮಾರ್ – vishwanews24

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ – ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ  ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್​​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

11 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago