ರಾಯಚೂರು  : ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ನಿರ್ಬಂಧ – Vishwanews24

Featured, ರಾಜ್ಯ ನ್ಯೂಸ್

ರಾಯಚೂರು  : ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ನಿರ್ಬಂಧ

ರಾಯಚೂರು : ರಾಯಚೂರು ಜಿಲ್ಲೆಗೂ ಧರ್ಮ ದಂಗಲ್ ಕಾಲಿಟ್ಟಿದ್ದು, ಗುರುಗಂಟ ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಕಾರ್ಯಕರ್ತರು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ಮಾಡಿದೆ.

ಮಾರ್ಚ್ 5 ರಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುರುಗಂಟ ಅಮರೇಶ್ವರ್ ಜಾತ್ರೆ ಹಿನ್ನೆಲೆಯಲ್ಲಿ ಅನ್ಯ ಧರ್ಮದವರಿಗೆ ವ್ಯಾಪರಕ್ಕೆ ಅವಕಾಶ ನೀಡಬಾರದು ಹಿಂದೂಗಳಿಗೆ ಮಾತ್ರ ಟೆಂಡರ್ ನೀಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ದೇವರ ಜಾತ್ರೆ ಉತ್ಸವಗಳಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರುವಂತೆ ಹಿಂದೂಪರ ಸಂಘಟನೆಗಳು ದೊಡ್ಡ ರೀತಿಯಲ್ಲಿ ಅಭಿಯಾನ ಕೈಗೊಂಡಿದ್ದರು.

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕ ಶವವಾಗಿ ಪತ್ತೆ: ಕೊಲೆ ಶಂಕೆ – Vishwanews24

Leave a Reply