ರಾಯಚೂರು: ಜಿಲ್ಲೆಯಲ್ಲಿ ಬ್ರ್ಯಾಂಡೆಡ್ ವಸ್ತುಗಳ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪ್ನಲ್ಲಿ ನಕಲಿ ಚಹಾಪುಡಿ, ಕೊಬ್ಬರಿ ಎಣ್ಣೆ, ಫೆವಿಕಾಲ್, ಡಿಟರ್ಜೆಂಟ್ ಪೌಡರ್ ತಯಾರಿಸಿ ಬ್ರ್ಯಾಂಡೆಡ್ ಕಂಪನಿ ಲೆಬಲ್ ಹಾಕಿ ಜಿಲ್ಲೆಯ ಹಲವೆಡೆ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು, ರತನ್ ಸಿಂಗ್, ರಾಘವೇಂದ್ರ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ 16 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿಯಾಗಿವೆ. ನಕಲಿ ಉತ್ಪನ್ನಗಳ ಪ್ಯಾಕೆಟ್ಗಳು, ಪ್ಯಾಕಿಂಗ್ ಯಂತ್ರಗಳು, ಬುಲೆರೋ ಪಿಕಪ್ ವಾಹನ ಹಾಗೂ ಕಚ್ಚಾ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರ್ನಾಲ್ಕು ತಿಂಗಳಿಂದ ಗ್ರಾಮದ ಹಳೆಯ ರೆಸಿಡೆನ್ಸಿ ಶಾಲೆಯೊಂದರ ಕೊಠಡಿಯಲ್ಲಿ ನಕಲಿ ದಂಧೆ ನಡೆದಿದೆ. ತಮ್ಮದೇ ಆದ ಮಾರ್ಕೆಟಿಂಗ್ ಜಾಲವನ್ನು ಇಟ್ಟುಕೊಂಡು ಗ್ರಾಮೀಣ ಭಾಗದಲ್ಲಿ ಅಸಲಿ ವಸ್ತುಗಳೆಂದೇ ಮಾರಾಟ ಮಾಡುತ್ತಿದ್ದರು. ಇದೀಗ ಪೊಲೀಸರು ನಕಲಿ ಮಾರಾಟ ದಂಧೆಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಾಗಿಸಿಕೊಂಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…