ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಲವ್ಕೇಸ್ ನಡೆದಿದೆ ಎನ್ನಲಾಗಿದ್ದು, ಅಶ್ರಯ ನೀಡಿದ್ದ ಮನೆಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ರಾಯಚೂರಿನ ರೆಹಾನ್ ಎನ್ನುವವನ ವಿರುದ್ದ ಲವ್ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್ ಡೌನ್ವೇಳೆಯಲ್ಲಿ ರೆಹಾನ್ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯಪಡೆದುಕೊಂಡಿದ್ದ ಎನ್ನಲಾಗಿದೆ.
ಈ ವೇಳೆಯಲ್ಲಿ ಮನೆ ಮಾಲೀಕರ ಯುವತಿಯನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇನ್ನೂ ಇಬ್ಬರ ನಡುವೆ ಲವ್ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್ ಮುಗಿಸಿಕೊಂಡು ಬಂದಿದ್ದಾಳೆ. ಈ ವೇಳೆ ಪ್ರಕರಣ ಸಂಬಂಧ ತನಿಖೆ ಪೋಲಿಸ್ನವರ ಮುಂದೆಯೇ ಯುವತಿ ತನ್ನ ಹೆತ್ತವರಿಗೆ ಬೈದಿದ್ದಾಳೆ ಎನ್ನಲಾಗಿದೆ. ಇದಲ್ಲದೇ ಯುವತಿಗೆ ಬೇರೆಯವರ ಜೊತೆಗೆ ಎಂಗ್ಯೇಜ್ಮೆಂಟ್ ಕೂಡ ಆಗಿತ್ತು ಎನ್ನಲಾಗಿದೆ.
ಮಗಳ ಈ ಸ್ಥಿತಿಗೆ ಮುಸ್ಲಿಂ ಯುವಕ ರೆಹಾನ್ ಕಾರಣ. ಆತ ನಮ್ಮ ಮಗಳ ಮನಸನ್ನು ಸಂಪೂರ್ಣವಾಗಿ ಕೆಡಿಸಿದ್ದಾನೆ ಎಂದು ಆಕೆಯ ತಾಯಿ ನಾಗಮ್ಮ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥವೂ ಆಗಿತ್ತು. ಇನ್ನೊಂದು ತಿಂಗಳಲ್ಲಿ ಮದುವೆ ನಡೆಯುವುದಿತ್ತು. ಅದಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೆವು. ಮದುವೆಗೆ ಬೇಕಾದ ವಸ್ತುಗಳನ್ನೆಲ್ಲ ತಂದಿಟ್ಟುಕೊಂಡಿದ್ದೆವು. ಈಗ ನೋಡಿದರೆ ಆ ಮುಸ್ಲಿಂ ಹುಡುಗ ಹೀಗೆ ಮಾಡಿದ್ದಾನೆ. ನನ್ನ ಪುತ್ರಿಗೆ ಬುರ್ಖಾ ಹಾಕಿಸಲಾಗಿದೆ. ನಮಗೆ ಬುರ್ಖಾ ಬೇಕಿಲ್ಲ, ಆ ಯುವಕ ರೆಹಾನ್ ಕೂಡ ಬೇಕಾಗಿಲ್ಲ. ನಮಗೆ ನನ್ನ ಮಗಳು ಬೇಕು’ ಎಂದು ಗೋಳಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…