ರಾಯಚೂರು: ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಹೊರಟಿದ್ದ ಮೂವತ್ತಮೂರು ಅಡಿ ಎತ್ತರದ ಏಕಶಿಲಾ ಆಂಜನೇಯ ದೇವರ ವಿಗ್ರಹ ಮಂತ್ರಾಲಯಕ್ಕೆ ತಲುಪಿದೆ.
ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಪ್ರತಿಷ್ಠಾಪಿಸಲು ಉದ್ದೇಶಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹಕ್ಕೆ ಮಂತ್ರಾಲಯದಲ್ಲಿ ಬುಧವಾರ ಭವ್ಯ ಸ್ವಾಗತ ನೀಡಲಾಯಿತು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಎಮ್ಮಿಗನೂರು ರಸ್ತೆಯಲ್ಲಿರುವ ಬಸ್ ನಿಲ್ದಾಣ ಬಳಿ ವಿಗ್ರಹಕ್ಕೆ ಪೂಜೆ ನೆರವೇರಿಸಿ ಬರಮಾಡಿಕೊಂಡರು. ನಂತರ ಗ್ರಾಮದ ಮುಖ್ಯರಸ್ತೆಯಲ್ಲಿ ಭಜನೆ ಸಂಕೀರ್ತನೆ, ಮಂಗಳ ವಾದ್ಯ ಮೇಳದೊಂದಿಗೆ ವಿಗ್ರಹವನ್ನು ಶ್ರೀಮಠದ ಗೋಶಾಲೆ ಬಳಿಯ ನೂತನ ವಿದ್ಯಾಪೀಠದವರೆಗೆ ಮೆರವಣಿಗೆಯಲ್ಲಿ ತರಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ಆಂಜಿನೇಯ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…