ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.
ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…