Featured

ರಾವತ್ ನಿವಾಸಕ್ಕೆ ಪಾರ್ಥಿವ ಶರೀರ: ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರಿಂದ ಅಂತಿಮ ನಮನ – Vishwanews24

ರಾವತ್ ನಿವಾಸಕ್ಕೆ ಪಾರ್ಥಿವ ಶರೀರ: ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರಿಂದ ಅಂತಿಮ ನಮನ – Vishwanews24

ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.

ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್‌ ಲಖ್ವಿಂದರ್ ಸಿಂಗ್‌ ಲಿದ್ದರ್‌ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್‌ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.

ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.

Vishwa News 24

Recent Posts

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

1 hour ago

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

2 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

2 days ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

2 days ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

2 days ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

2 days ago