ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.
ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…