ಬೆಂಗಳೂರು: ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಅತಿ ದುಃಖದ ದಿನವಾಗಿದೆ. ಆ ದುಃಖವನ್ನ ಹೇಳುವುದಕ್ಕೆ ಸಾಧ್ಯವಿಲ್ಲ. ನಮಗೆ ಒಂದು ಸಂವಿಧಾನ ಕೊಟ್ಟಿದ್ದಾರೆ. ನಮ್ಮ ಧ್ವಜವೇ ನಮ್ಮ ಧರ್ಮ. ನಮ್ಮ ದೇಶ ಕಟ್ಟಲು ಐಕ್ಯತೆಗೆ ಹಲವರು ಪ್ರಾಣ ಕೊಟ್ಟಿದ್ದಾರೆ. ನಮ್ಮ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ. ರಾಜ್ಯದಲ್ಲಿ ಏನ್ ಆಗ್ತಿದೆ ಎಂದು ಡಿಕೆಶಿ ಪ್ರಶ್ನಿಸಿದರು.
ಕೇಸರಿ ಬಗ್ಗೆ ಎಲ್ಲರಿಗೂ ಗೌರವ ಇದೆ. ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ. ಹೀಗಿರುವಾಗ ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ. ರಾಷ್ಟ್ರಧ್ವಜ ಇಳಿಸಿರುವುದಕ್ಕೆ ಯಾರು ಉತ್ತರ ಕೊಡ್ತಾರೆ..? ವಿದ್ಯಾರ್ಥಿಗಳ ಭವಿಷ್ಯ ಅವರ ಉದ್ಯೋಗದಲ್ಲಿ ಬದುಕಿನ ಬಗ್ಗೆ ಯೋಚನೆ ಮಾಡಬೇಕು. ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು. ಮೊದಲಿನಿಂದ ಏನು ಪಾಲನೆ ಮಾಡಿಕೊಂಡು ಬಂದಿದ್ದಾರೆ ಅದನ್ನ ಮುಂದುವರಿಸಿಕೊಂಡು ಹೋಗಬೇಕು ಎಂದರು.
ನಾನು ಸಿಎಂಗೆ ಮನವಿ ಮಾಡ್ತೇನೆ. ರಾಜ್ಯಕ್ಕೆ ಹಿಂದಕ್ಕೆ ಹೋಗುತ್ತಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು. ಸಮಸ್ಯೆ ಬಗ್ಗೆ ಹರಿಯುವರಿಗೂ ಒಂದು ವಾರಗಳ ಕಾಲೇಜುಗಳನ್ನು ಬಂದ್ ಮಾಡಿ. ಪೋಷಕರು, ಶಾಲಾ ಆಡಳಿತ ಮಂಡಳಿ, ಜಿಲ್ಲಾ ಆಡಳಿತ ಜೊತೆ ಚರ್ಚೆ ತೀರ್ಮಾನ ಮಾಡಲಿ. ಒಟ್ಟಿನಲ್ಲಿ ರಾಜ್ಯಾದ್ಯಂತ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂಗೆ ಕೈಮುಗಿದು ಡಿಕೆಶಿ ಮನವಿ ಮಾಡಿದರು.
ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ. ಆರ್ಡರ್ ಕೊಟ್ಟಿರುವವರ ಬಗ್ಗೆ ಗೊತ್ತಿದೆ. ಇದು ಇನ್ನೆಲ್ಲಿಗೆ ಹೋಗುತ್ತೋ ಗೊತ್ತಿಲ್ಲ. ಸೀಮೆಎಣ್ಣೆ, ಪೆಟ್ರೋಲ್ ಹಾಕೋರು ಗೊತ್ತಿದೆ. ಮೊದಲು ಇದನ್ನ ನಿಲ್ಲಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಕಿಡಿಕಾರಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…