ಬೆಂಗಳೂರು: ರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.
ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…