Featured

ರಾಷ್ಟ್ರಪತಿ ಚುನಾವಣೆ: ಮೋದಿ ಭೇಟಿಯಾದ ದ್ರೌಪದಿ ಮುರ್ಮು, ನಾಳೆ ನಾಮಪತ್ರ ಸಲ್ಲಿಕೆ – Vishwanews24

ರಾಷ್ಟ್ರಪತಿ ಚುನಾವಣೆ: ಮೋದಿ ಭೇಟಿಯಾದ ದ್ರೌಪದಿ ಮುರ್ಮು, ನಾಳೆ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರಪತಿ ಸ್ಥಾನದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗುರುವಾರ ಒಡಿಶಾದ ಭುವನೇಶ್ವರದಿಂದ ರಾಜಧಾನಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದರು.

‘ಮುರ್ಮು ಅವರ ಆಯ್ಕೆಗೆ ಸಮಾಜದ ಎಲ್ಲ ಸ್ತರಗಳಿಂದ, ದೇಶದಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ. ಕೆಳಹಂತದ ಸಮಸ್ಯೆಗಳ ಬಗ್ಗೆ ಅವರಿಗೆ ಇರುವ ಅರಿವು, ದೇಶದ ಪ್ರಗತಿ ಕುರಿತು ಅವರ ದೂರದೃಷ್ಟಿ ಶ್ಲಾಘನಾರ್ಹ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಮುಖಂಡರ ಉಪಸ್ಥಿತಿಯಲ್ಲಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸದಲ್ಲಿ ನಾಮಪತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಧಾನಿ ಮೋದಿ, ಹಿರಿಯ ಸಚಿವರಾದ ರಾಜನಾಥ ಸಿಂಗ್, ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖರು ಮುರ್ಮು ಅವರ ಹೆಸರು ಪ್ರಸ್ತಾಪಿಸಲಿದ್ದಾರೆ.

ಉಳಿದಂತೆ ಮುರ್ಮು ಹೆಸರು ಅನುಮೋದಿಸಲಿರುವ ಕೇಂದ್ರದ ಸಚಿವರುಗಳು, ಹಿರಿಯ ಬಿಜೆಪಿ ನಾಯಕರು ಹಾಗೂ ಇವರಿಗೆ ಬೆಂಬಲ ಘೋಷಿಸಿರುವ ಬಿಜೆಡಿಯ ಸಸ್ಮಿತ್ ಪಾತ್ರಾ ಸೇರಿದಂತೆ ಹಲವು ಮುಖಂಡರು ಜೋಶಿ ಅವರ ನಿವಾಸದಲ್ಲಿ ಸೇರಿದ್ದರು.

ದೆಹಲಿಗೆ ತೆರಳುವ ಮುನ್ನ ನೀಡಿದ ಹೇಳಿಕೆಯಲ್ಲಿ ಮುರ್ಮು ಅವರು, ‘ಎಲ್ಲರಿಗೂ ಕೃತಜ್ಞತೆಗಳು. ರಾಷ್ಟ್ರಪತಿ ಚುನಾವಣೆಯಲ್ಲಿ ಎಲ್ಲರಿಂದಲೂ ಸಹಕಾರ ಕೋರುತ್ತೇನೆ. ಚುನಾವಣೆಗೆ ಮುನ್ನ ಮತದಾರರನ್ನು ಭೇಟಿಯಾಗಿ ಬೆಂಬಲ ಕೋರುತ್ತೇನೆ’ ಎಂದಿದ್ದಾರೆ.

ಆಯ್ಕೆಯಾದಲ್ಲಿ, ಮುರ್ಮು ಅವರು ರಾಷ್ಟ್ರಪತಿ ಸ್ಥಾನಕ್ಕೇರಿದ ಬುಡಕಟ್ಟು ಸಮಾಜದ ಪ್ರಥಮ ಮಹಿಳೆ ಹಾಗೂ ಈ ಸ್ಥಾನಕ್ಕೇರಿದ ದ್ವಿತೀಯ ಮಹಿಳೆಯಾಗಲಿದ್ದಾರೆ. ವಿರೋಧಪಕ್ಷಗಳು ಸರ್ವಸಮ್ಮತ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago