Featured

ರಾಷ್ಟ್ರಪತಿ ಚುನಾವಣೆ: ಮೋದಿ ಭೇಟಿಯಾದ ದ್ರೌಪದಿ ಮುರ್ಮು, ನಾಳೆ ನಾಮಪತ್ರ ಸಲ್ಲಿಕೆ – Vishwanews24

ರಾಷ್ಟ್ರಪತಿ ಚುನಾವಣೆ: ಮೋದಿ ಭೇಟಿಯಾದ ದ್ರೌಪದಿ ಮುರ್ಮು, ನಾಳೆ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರಪತಿ ಸ್ಥಾನದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗುರುವಾರ ಒಡಿಶಾದ ಭುವನೇಶ್ವರದಿಂದ ರಾಜಧಾನಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದರು.

‘ಮುರ್ಮು ಅವರ ಆಯ್ಕೆಗೆ ಸಮಾಜದ ಎಲ್ಲ ಸ್ತರಗಳಿಂದ, ದೇಶದಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ. ಕೆಳಹಂತದ ಸಮಸ್ಯೆಗಳ ಬಗ್ಗೆ ಅವರಿಗೆ ಇರುವ ಅರಿವು, ದೇಶದ ಪ್ರಗತಿ ಕುರಿತು ಅವರ ದೂರದೃಷ್ಟಿ ಶ್ಲಾಘನಾರ್ಹ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಮುಖಂಡರ ಉಪಸ್ಥಿತಿಯಲ್ಲಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸದಲ್ಲಿ ನಾಮಪತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಧಾನಿ ಮೋದಿ, ಹಿರಿಯ ಸಚಿವರಾದ ರಾಜನಾಥ ಸಿಂಗ್, ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖರು ಮುರ್ಮು ಅವರ ಹೆಸರು ಪ್ರಸ್ತಾಪಿಸಲಿದ್ದಾರೆ.

ಉಳಿದಂತೆ ಮುರ್ಮು ಹೆಸರು ಅನುಮೋದಿಸಲಿರುವ ಕೇಂದ್ರದ ಸಚಿವರುಗಳು, ಹಿರಿಯ ಬಿಜೆಪಿ ನಾಯಕರು ಹಾಗೂ ಇವರಿಗೆ ಬೆಂಬಲ ಘೋಷಿಸಿರುವ ಬಿಜೆಡಿಯ ಸಸ್ಮಿತ್ ಪಾತ್ರಾ ಸೇರಿದಂತೆ ಹಲವು ಮುಖಂಡರು ಜೋಶಿ ಅವರ ನಿವಾಸದಲ್ಲಿ ಸೇರಿದ್ದರು.

ದೆಹಲಿಗೆ ತೆರಳುವ ಮುನ್ನ ನೀಡಿದ ಹೇಳಿಕೆಯಲ್ಲಿ ಮುರ್ಮು ಅವರು, ‘ಎಲ್ಲರಿಗೂ ಕೃತಜ್ಞತೆಗಳು. ರಾಷ್ಟ್ರಪತಿ ಚುನಾವಣೆಯಲ್ಲಿ ಎಲ್ಲರಿಂದಲೂ ಸಹಕಾರ ಕೋರುತ್ತೇನೆ. ಚುನಾವಣೆಗೆ ಮುನ್ನ ಮತದಾರರನ್ನು ಭೇಟಿಯಾಗಿ ಬೆಂಬಲ ಕೋರುತ್ತೇನೆ’ ಎಂದಿದ್ದಾರೆ.

ಆಯ್ಕೆಯಾದಲ್ಲಿ, ಮುರ್ಮು ಅವರು ರಾಷ್ಟ್ರಪತಿ ಸ್ಥಾನಕ್ಕೇರಿದ ಬುಡಕಟ್ಟು ಸಮಾಜದ ಪ್ರಥಮ ಮಹಿಳೆ ಹಾಗೂ ಈ ಸ್ಥಾನಕ್ಕೇರಿದ ದ್ವಿತೀಯ ಮಹಿಳೆಯಾಗಲಿದ್ದಾರೆ. ವಿರೋಧಪಕ್ಷಗಳು ಸರ್ವಸಮ್ಮತ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago