Featured

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ – Vishwanews24

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ

ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ರಜಾಕಾಲದ ಪೀಠವು ಅರ್ಜಿದಾರರಿಗೆ ಹೀಗೆ ಹೇಳಿದೆ. ಅಂತಹ ಅರ್ಜಿ ಹಿಡಿದು ಅವು ಇಲ್ಲಿಗೇಕೆ ಬಂದಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ 32 ನೇ ವಿಧಿಯ ಅಡಿಯಲ್ಲಿ ಅದನ್ನು ಅರ್ಜಿ ಪರಿಗಣಿಸಲು ನ್ಯಾಯಾಲಯವು ಆಸಕ್ತಿ ಹೊಂದಿಲ್ಲ ಎಂದು ಒತ್ತಿ ಹೇಳಿದರು. ಅಲ್ಲದೆ ಕಲಂ 79 ಇಲ್ಲಿ ಹೇಗೆ ಪ್ರಸ್ತುತವಾಗುತ್ತದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಪ್ರಧಾನಿ ಕಟ್ಟಡ ಉದ್ಘಾಟಿಸುತ್ತಿರುವುದು ಸಂಪೂರ್ಣವಾಗಿ ವಿಧಿ 79 ಮತ್ತು 87 ಅನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸಿ.ಆರ್. ಜಯಾ ಸುಕಿನ್ ಹೇಳಿದರು. ಅಲ್ಲದೆ ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುವುದರಿಂದ ಅವರು ಕಟ್ಟಡವನ್ನು ಉದ್ಘಾಟಿಸಬೇಕು ಎಂದು ವಾದಿಸಿದರು. ಪೀಠವು ಅರ್ಜಿ ಸ್ವೀಕರಿಸಲು ನಿರಾಕರಿಸಿದ ನಂತರ, ಸುಕಿನ್ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ವಕೀಲರಾದ ಸಿ.ಆರ್.ಜಯಾ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳಾದ ಲೋಕಸಭೆ ಸಚಿವಾಲಯ, ಭಾರತ ಕೇಂದ್ರ, ಗೃಹ ಸಚಿವಾಲಯ ಮತ್ತು ಭಾರತ ಕೇಂದ್ರ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂವಿಧಾನವನ್ನು ಉಲ್ಲಂಘಿಸಿದೆ, ಸಂವಿಧಾನವನ್ನು ಗೌರವಿಸುತ್ತಿಲ್ಲ ಎಂದು ಉಲ್ಲೇಕಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago