Featured

ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಒಗ್ಗಟ್ಟಾಗಬೇಕು : ರಹೀಮ್ ಉಚ್ಚಿಲ್ – Vishwnaews24

ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ..

ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು..

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ..

ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ.

ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದಾರೆ.

ಇವರು ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಹಾಗೂ ಪಾಕಿಸ್ತಾನಕ್ಕೆ ನೇರ ಸಂದೇಶ ನೀಡಲು ಒಗ್ಗಟ್ಟಾಗಬೇಕೆಂದು ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಂಘಟನೆಗಳಿಗೆ ಆಗ್ರಹಿಸಿದ್ದಾರೆ.

ಭಾರತದ ಆಂತರಿಕ ಸಮಸ್ಯೆ ಏನೇ ಇದ್ದರೂ ಪರಸ್ಪರ ಬಗೆಹರಿಸಲು ನಾವು ಶಕ್ತರಿದ್ದೇವೆ. ಆದರೆ ಶತ್ರು ದೇಶದಂತೆ ವ್ಯವಹರಿಸುತ್ತಿರುವ ಪಾಕಿಸ್ತಾನ ನಮ್ಮ ಸಹನೆಯನ್ನು ಪರೀಕ್ಷಿಸುತ್ತಿದ್ದು ಭಾರತದ ಮುಸಲ್ಮಾನರು ಒಗ್ಗೂಡಿ ಇಂತಹ ಕೃತ್ಯವನ್ನು ಗಟ್ಟಿ ದನಿಯಲ್ಲಿ ವಿರೋಧಿಸಬೇಕಾಗಿದೆ ಎಂದು ಹೇಳಿರುವ ಅವರು ಇದಕ್ಕೆ ಪಂಥ ಪಂಗಡ ಹಾಗೂ ರಾಜಕೀಯ ಬದಿಗಿಟ್ಟು ಧಾರ್ಮಿಕ ನಾಯಕರ ಮುಖಂಡತ್ವದಲ್ಲಿ ಒಂದಾಗಬೇಕು ಎಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಯುದ್ಧ ಘೋಷಣೆಯಾದರೆ ಭಾರತದ ಮುಸಲ್ಮಾನರು ದೇಶಕ್ಕಾಗಿ ಪ್ರಾಣ ಅರ್ಪಿಸಲು ಸಿದ್ದರಾಗಿ ಎಂದು ಕರೆ ನೀಡಿದ ಅಂದಿನ ಮೌಲಾನಗಳು ಅದೇ ಮಾತನ್ನು ಮತ್ತೊಮ್ಮೆ ತಮ್ನ ಸಮಾಜ ಬಾಂಧವರಿಗೆ ಕರೆ ನೀಡುವ ಕಾಲ ಸನ್ನಿಹಿತವಾಗಿದ್ದು ಪಾಕಿಸ್ತಾನದ ಹಾಗೂ ಅದರ ಬೆಂಬಲಿತರ ಉಪಟಳ ಹೆಚ್ಚಾಗುವಾಗ ಇಂತಹ ಕರೆ ದೇಶದ ಹಿತದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ ಎಂದು ರಹೀಮ್ ಉಚ್ಚಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ. ಬಿನ್ ಲ್ಯಾಡನ್ ಮುಲ್ಲಾ ಉಮರ್ ರಂತವರ ಅನುಯಾಯಿಗಳಿಂದ ಮಾತ್ರ ಇಂತಹ ಕೃತ್ಯ ಸಾಧ್ಯವೇ ಹೊರತು ಪ್ರವಾದಿ ಮುಹಮ್ಮದರ ಅನುಯಾಯಿಗಳಿಂದ ಇದು ಸಾಧ್ಯವಿಲ್ಲ .ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ಎಂದು ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.\

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

4 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago