Featured

ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಒಗ್ಗಟ್ಟಾಗಬೇಕು : ರಹೀಮ್ ಉಚ್ಚಿಲ್ – Vishwnaews24

ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ..

ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು..

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ..

ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ.

ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದಾರೆ.

ಇವರು ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಹಾಗೂ ಪಾಕಿಸ್ತಾನಕ್ಕೆ ನೇರ ಸಂದೇಶ ನೀಡಲು ಒಗ್ಗಟ್ಟಾಗಬೇಕೆಂದು ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಂಘಟನೆಗಳಿಗೆ ಆಗ್ರಹಿಸಿದ್ದಾರೆ.

ಭಾರತದ ಆಂತರಿಕ ಸಮಸ್ಯೆ ಏನೇ ಇದ್ದರೂ ಪರಸ್ಪರ ಬಗೆಹರಿಸಲು ನಾವು ಶಕ್ತರಿದ್ದೇವೆ. ಆದರೆ ಶತ್ರು ದೇಶದಂತೆ ವ್ಯವಹರಿಸುತ್ತಿರುವ ಪಾಕಿಸ್ತಾನ ನಮ್ಮ ಸಹನೆಯನ್ನು ಪರೀಕ್ಷಿಸುತ್ತಿದ್ದು ಭಾರತದ ಮುಸಲ್ಮಾನರು ಒಗ್ಗೂಡಿ ಇಂತಹ ಕೃತ್ಯವನ್ನು ಗಟ್ಟಿ ದನಿಯಲ್ಲಿ ವಿರೋಧಿಸಬೇಕಾಗಿದೆ ಎಂದು ಹೇಳಿರುವ ಅವರು ಇದಕ್ಕೆ ಪಂಥ ಪಂಗಡ ಹಾಗೂ ರಾಜಕೀಯ ಬದಿಗಿಟ್ಟು ಧಾರ್ಮಿಕ ನಾಯಕರ ಮುಖಂಡತ್ವದಲ್ಲಿ ಒಂದಾಗಬೇಕು ಎಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಯುದ್ಧ ಘೋಷಣೆಯಾದರೆ ಭಾರತದ ಮುಸಲ್ಮಾನರು ದೇಶಕ್ಕಾಗಿ ಪ್ರಾಣ ಅರ್ಪಿಸಲು ಸಿದ್ದರಾಗಿ ಎಂದು ಕರೆ ನೀಡಿದ ಅಂದಿನ ಮೌಲಾನಗಳು ಅದೇ ಮಾತನ್ನು ಮತ್ತೊಮ್ಮೆ ತಮ್ನ ಸಮಾಜ ಬಾಂಧವರಿಗೆ ಕರೆ ನೀಡುವ ಕಾಲ ಸನ್ನಿಹಿತವಾಗಿದ್ದು ಪಾಕಿಸ್ತಾನದ ಹಾಗೂ ಅದರ ಬೆಂಬಲಿತರ ಉಪಟಳ ಹೆಚ್ಚಾಗುವಾಗ ಇಂತಹ ಕರೆ ದೇಶದ ಹಿತದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ ಎಂದು ರಹೀಮ್ ಉಚ್ಚಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ. ಬಿನ್ ಲ್ಯಾಡನ್ ಮುಲ್ಲಾ ಉಮರ್ ರಂತವರ ಅನುಯಾಯಿಗಳಿಂದ ಮಾತ್ರ ಇಂತಹ ಕೃತ್ಯ ಸಾಧ್ಯವೇ ಹೊರತು ಪ್ರವಾದಿ ಮುಹಮ್ಮದರ ಅನುಯಾಯಿಗಳಿಂದ ಇದು ಸಾಧ್ಯವಿಲ್ಲ .ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ಎಂದು ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.\

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago