ಉಡುಪಿ: ರಾಷ್ಟ್ರೀಯ ಕಾನೂನು ಪ್ರಾಧಿಕಾರ ಭಾರತ ಸರಕಾರ-ನವದೆಹಲಿ ಇವರಿಂದ ನೀಡಲ್ಪಡುವ, “ರಾಷ್ಟ್ರಮಟ್ಟದ ಉತ್ತಮ ಕಾನೂನು ಪ್ರಾಧಿಕಾರದ ಸ್ವಯಂಸೇವಕ” ವಿಶೇಷ ಗೌರವಕ್ಕೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆಗೊಳಿಸಿದ್ದಾರೆ.
ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಈ ಸಾಲಿನ ಏಕೈಕ ವ್ಯಕ್ತಿ ಮತ್ತು ಉಡುಪಿ ಜಿಲ್ಲೆಯ ಸಾಧಕರಿಗೆ ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿಂದ ಸಲ್ಲಿಕೆಯಾಗುವ ಗೌರವಕ್ಕೆ ಪಾತ್ರವಾಗುವ ಪ್ರಥಮ ಸಾಧಕ ವ್ಯಕ್ತಿ ಇವರೆಂದು ತಿಳಿದು ಬಂದಿದೆ.
ವಿಶು ಶೆಟ್ಟಿ ಅವರು ಯಾವುದೇ ಫಲಾಪೇಕ್ಷೆ ಬಯಸದೆ ಮಾಡಿರುವ ಅಪ್ರತಿಮ ಸಮಾಜಸೇವೆ, ಕಾನೂನಿನ ಪರಿಪಾಲನೆ, ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆಯರ ರಕ್ಷಣೆ, ಮಕ್ಕಳ ರಕ್ಷಣೆ, ಹಿರಿಯ ನಾಗರಿಕರ ರಕ್ಷಣೆ, ಮಾನಸಿಕ ಅಸ್ವಸ್ಥರ ರಕ್ಷಣೆ, ನಿರ್ಗತಿಕರಿಗೆ ಪುರ್ನವಸತಿ, ಶಿಕ್ಷಣಕ್ಕೆ ನೆರವು ಮೊದಲಾದ ಮಾದರಿಯ ಸಮಾಜಮುಖಿ ಕೆಲಸ ಕಾರ್ಯಗಳ ಗುರುತಿಸಿ ಇವರನ್ನು ಗೌರವಕ್ಕೆ ಆಯ್ಕೆಗೊಳಿಸಲಾಗಿದೆ.
ನವೆಂಬರ್ ೯ ರಂದು ನವದೆಹಲಿಯ ಸುಪ್ರಿಂಕೊರ್ಟ್ನಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಹಾಗೂ ಸುಪ್ರಿಂಕೊರ್ಟಿನ ಮುಖ್ಯ ನ್ಯಾಯಧೀಶರುಗಳಿಂದ ವಿಶು ಶೆಟ್ಟಿ ಅವರು ಗೌರವ ಸ್ವೀಕರಿಸಲಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…