ಉಡುಪಿ: ರಾಷ್ಟ್ರೀಯ ಕಾನೂನು ಪ್ರಾಧಿಕಾರ ಭಾರತ ಸರಕಾರ-ನವದೆಹಲಿ ಇವರಿಂದ ನೀಡಲ್ಪಡುವ, “ರಾಷ್ಟ್ರಮಟ್ಟದ ಉತ್ತಮ ಕಾನೂನು ಪ್ರಾಧಿಕಾರದ ಸ್ವಯಂಸೇವಕ” ವಿಶೇಷ ಗೌರವಕ್ಕೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆಗೊಳಿಸಿದ್ದಾರೆ.
ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಈ ಸಾಲಿನ ಏಕೈಕ ವ್ಯಕ್ತಿ ಮತ್ತು ಉಡುಪಿ ಜಿಲ್ಲೆಯ ಸಾಧಕರಿಗೆ ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿಂದ ಸಲ್ಲಿಕೆಯಾಗುವ ಗೌರವಕ್ಕೆ ಪಾತ್ರವಾಗುವ ಪ್ರಥಮ ಸಾಧಕ ವ್ಯಕ್ತಿ ಇವರೆಂದು ತಿಳಿದು ಬಂದಿದೆ.
ವಿಶು ಶೆಟ್ಟಿ ಅವರು ಯಾವುದೇ ಫಲಾಪೇಕ್ಷೆ ಬಯಸದೆ ಮಾಡಿರುವ ಅಪ್ರತಿಮ ಸಮಾಜಸೇವೆ, ಕಾನೂನಿನ ಪರಿಪಾಲನೆ, ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆಯರ ರಕ್ಷಣೆ, ಮಕ್ಕಳ ರಕ್ಷಣೆ, ಹಿರಿಯ ನಾಗರಿಕರ ರಕ್ಷಣೆ, ಮಾನಸಿಕ ಅಸ್ವಸ್ಥರ ರಕ್ಷಣೆ, ನಿರ್ಗತಿಕರಿಗೆ ಪುರ್ನವಸತಿ, ಶಿಕ್ಷಣಕ್ಕೆ ನೆರವು ಮೊದಲಾದ ಮಾದರಿಯ ಸಮಾಜಮುಖಿ ಕೆಲಸ ಕಾರ್ಯಗಳ ಗುರುತಿಸಿ ಇವರನ್ನು ಗೌರವಕ್ಕೆ ಆಯ್ಕೆಗೊಳಿಸಲಾಗಿದೆ.
ನವೆಂಬರ್ ೯ ರಂದು ನವದೆಹಲಿಯ ಸುಪ್ರಿಂಕೊರ್ಟ್ನಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಹಾಗೂ ಸುಪ್ರಿಂಕೊರ್ಟಿನ ಮುಖ್ಯ ನ್ಯಾಯಧೀಶರುಗಳಿಂದ ವಿಶು ಶೆಟ್ಟಿ ಅವರು ಗೌರವ ಸ್ವೀಕರಿಸಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…