ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯವಾದಿಗಳು, ಅಪ್ಪಟ ದೇಶ ಭಕ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ. ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ಅಣ್ಣಾಮಲೈ ಅವರನ್ನು ತುಂಬು ಹೃದಯದಿಂದ ನಮ್ಮ ಬಿಜೆಪಿ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು, ಮಾದರಿ ಕಾರ್ಯದಕ್ಷತೆಗೆ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಪಕ್ಷದ ಸದಸ್ಯತ್ವ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅಣ್ಣಾಮಲೈ ಅವರು, ನಾನು ಸಾಮಾನ್ಯ ಕಾರ್ಯಕರ್ತನಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗಿಂತ ಮುನ್ನ ಸಾವಿರಾರು ಕಾರ್ಯಕರ್ತರು ಪಕ್ಷಕ್ಕಾಗಿ ಕೆಲಸ ಮಾಡಿದ್ದು, ನಾನು ಪಕ್ಷದಲ್ಲಿ ಏನನ್ನು ನಿರೀಕ್ಷೆ ಮಾಡದೆ ಸೇರ್ಪಡೆಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…