ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ರಾಹುಲ್ ದ್ರಾವಿಡ್ ನೇಮಕ -Vishwanews24
ಹೊಸದಿಲ್ಲಿ, : ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಟೀಂ ಇಂಡಿಯಾದ ಮಾಜಿ ನಾಯಕ, ಜ್ಯೂನಿಯರ್ ತಂಡದ ಕೋಚ್ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ಘೋಷಣೆ ಮಾಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಾಹುಲ್ ಅವರಿಗೆ ಈ ಜವಾಬ್ದಾರಿ ನೀಡಿದ್ದು, ಬೆಂಗಳೂರಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
https://twitter.com/BCCI/status/1148298708498309120
ಗೋಡೆ ಎಂದೇ ಖ್ಯಾತರಾಗಿರುವ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 25 ಸಾವಿರಕ್ಕೂ ಹೆಚ್ಚು ರನ್ಗಳಿಸಿದ ಭಾರತ ಎರಡನೇ ಬ್ಯಾಟ್ಸ್ಮನ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಇವರು ಕೇವಲ ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರವೇ ತೊಡಿಗಿಸಿಕೊಂಡಿಲ್ಲ. ಬದಲಾಗಿ ಅವರು ಚಿಲ್ಡ್ರನ್ಸ್ ಮೂಮೆಂಟ್ ಫಾರ್ ಸಿವಿಕ್ ಅವೆರ್ನಸ್, ಏಡ್ಸ್ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲೂ ಭಾಗಿಯಾಗಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ದ್ರಾವಿಡ್ ಎನ್ಸಿಎ ಮುಖ್ಯಸ್ಥ ಸ್ಥಾನ ವಹಿಸುವದರೊಂದಿಗೆ ಯುವ ಆಟಗಾರರಿಗೆ ತರಬೇತಿ, ಗಾಯಾಳುಗಳಿಗೆ ಪುನಶ್ಚೇತನ ಶಿಬಿರ ಸೇರಿದಂತೆ ಅನೇಕ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಪುರುಷ ತಂಡದ ಜತೆಗೆ ಮಹಿಳಾ ತಂಡಗಳಿಗೂ ನೆರವಾಗಲಿದ್ದಾರೆ.

