ಹೊಸದಿಲ್ಲಿ, : ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಟೀಂ ಇಂಡಿಯಾದ ಮಾಜಿ ನಾಯಕ, ಜ್ಯೂನಿಯರ್ ತಂಡದ ಕೋಚ್ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ಘೋಷಣೆ ಮಾಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಾಹುಲ್ ಅವರಿಗೆ ಈ ಜವಾಬ್ದಾರಿ ನೀಡಿದ್ದು, ಬೆಂಗಳೂರಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಗೋಡೆ ಎಂದೇ ಖ್ಯಾತರಾಗಿರುವ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 25 ಸಾವಿರಕ್ಕೂ ಹೆಚ್ಚು ರನ್ಗಳಿಸಿದ ಭಾರತ ಎರಡನೇ ಬ್ಯಾಟ್ಸ್ಮನ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಇವರು ಕೇವಲ ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರವೇ ತೊಡಿಗಿಸಿಕೊಂಡಿಲ್ಲ. ಬದಲಾಗಿ ಅವರು ಚಿಲ್ಡ್ರನ್ಸ್ ಮೂಮೆಂಟ್ ಫಾರ್ ಸಿವಿಕ್ ಅವೆರ್ನಸ್, ಏಡ್ಸ್ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲೂ ಭಾಗಿಯಾಗಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ದ್ರಾವಿಡ್ ಎನ್ಸಿಎ ಮುಖ್ಯಸ್ಥ ಸ್ಥಾನ ವಹಿಸುವದರೊಂದಿಗೆ ಯುವ ಆಟಗಾರರಿಗೆ ತರಬೇತಿ, ಗಾಯಾಳುಗಳಿಗೆ ಪುನಶ್ಚೇತನ ಶಿಬಿರ ಸೇರಿದಂತೆ ಅನೇಕ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಪುರುಷ ತಂಡದ ಜತೆಗೆ ಮಹಿಳಾ ತಂಡಗಳಿಗೂ ನೆರವಾಗಲಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…