ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತಿತರರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ ಮತ್ತು ಯತ್ನಾಳ ಮಧ್ಯೆ ಹೊಂದಾಣಿಕೆ ಮಾಡಿಸುವ ಕುರಿತು ಮಾತುಕತೆಗಳು ನಡೆದಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಕುರಿತು ಕೇಳಲಾದ ಪ್ರಶ್ನಗೆ ಉತ್ತರಿಸಿದ ಯತ್ನಾಳ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ ಎಂದು ಹೇಳಿದರು.
ತಮಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಆದರೆ ನಾನು ವಿಜಯೆಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…