Featured

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಂಡ ಅಮರ್ ಜವಾನ್ ಜ್ಯೋತಿ – Vishwanews24

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಂಡ ಅಮರ್ ಜವಾನ್ ಜ್ಯೋತಿ

ಕಳೆದ ಐವತ್ತು ವರ್ಷಗಳಿಂದ ಇಂಡಿಯಾ ಗೇಟ್ ಬಳಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ..

ಜ್ಯೋತಿಯನ್ನು ಆರಿಸುತ್ತಿಲ್ಲ ಇದನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನ ಮಾಡುತ್ತಿದ್ದೇವೆ –  ಕೇಂದ್ರ ಸ್ಪಷ್ಟನೆ

ಅಮರರಾದ ಸೈನಿಕರ ಜ್ಯೋತಿ ಯುದ್ಧ ಸ್ಮಾರಕದಲ್ಲಿ ಉರಿಯಲಿದೆ ..

ನವದೆಹಲಿ: 50 ವರ್ಷಗಳ ಬಳಿಕ ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ಜ್ವಾಲೆಯನ್ನು ಇಂದು ನಂದಿಸಲಾಗುತ್ತದೆ. ಗಣರಾಜ್ಯೋತ್ಸವದ ಮುನ್ನಾದಿನದಂದು ಪಕ್ಕದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಜ್ವಾಲೆಯೊಂದಿಗೆ ಇದು ವಿಲೀನಗೊಳ್ಳಲಿದೆ.

ಸಮಾರಂಭದಲ್ಲಿ ಸಂಯೋಜಿತ ರಕ್ಷಣಾ ಮುಖ್ಯಸ್ಥ ಏರ್ ಮಾರ್ಷಲ್ ಬಲಭದ್ರ ರಾಧಾ ಕೃಷ್ಣ ಅವರು ಎರಡು ಜ್ವಾಲೆಗಳನ್ನು ವಿಲೀನಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುತಾತ್ಮರಾದ ಸೈನಿಕರ ಸ್ಮರಣಾರ್ಥ ನಿರ್ಮಾಣ: ಇಂಡಿಯಾ ಗೇಟ್ ಸ್ಮಾರಕವನ್ನು ಬ್ರಿಟಿಷ್ ಸರ್ಕಾರ 1914-1921ರ ನಡುವೆ ಹುತಾತ್ಮರಾದ ಬ್ರಿಟಿಷ್ ಭಾರತೀಯ ಸೈನಿಕರ ನೆನಪಿಗಾಗಿ ನಿರ್ಮಿಸಿತ್ತು. ಅಮರ್ ಜವಾನ್ ಜ್ಯೋತಿ ಎಂದು ಕರೆಯಲ್ಪಡುವ ಶಾಶ್ವತ ಜ್ವಾಲೆಯನ್ನು 1971ರ ಇಂಡೋ – ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮರಣಾರ್ಥ ಇಂಡಿಯಾ ಗೇಟ್ ಕಮಾನಿನ ಕೆಳಗೆ 1972 ರಲ್ಲಿ ನಿರ್ಮಿಸಲಾಗಿತ್ತು.

 

2 ವರ್ಷಗಳ ಹಿಂದೆ ರಾಷ್ಟ್ರೀಯ ಯುದ್ಧ ಸ್ಮಾರಕ ಅಸ್ತಿತ್ವಕ್ಕೆ ಬಂದ ನಂತರ ಅಮರ್ ಜವಾನ್ ಜ್ಯೋತಿಯ ಅಸ್ತಿತ್ವವನ್ನು ಪ್ರಶ್ನಿಸಲಾಯಿತು. ಈ ಹಿಂದೆ, ಅಮರ್ ಜವಾನ್ ಜ್ಯೋತಿ ದೇಶದ ಇತಿಹಾಸದ ಅವಿಭಾಜ್ಯ ಭಾಗವಾಗಿರುವುದರಿಂದ ಅಮರ್ ಜವಾನ್ ಜ್ಯೋತಿ ಮುಂದುವರಿಯುತ್ತದೆ ಎಂದು ಭಾರತೀಯ ಸೇನೆ ಹೇಳಿಕೆ ನೀಡಿತ್ತು.

ಆದರೆ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹೊಸ ಶಾಶ್ವತ ಜ್ವಾಲೆ ಮತ್ತು ಸ್ಮಾರಕದಲ್ಲಿ ಎಲ್ಲ ಗೊತ್ತುಪಡಿಸಿದ ದಿನಗಳಲ್ಲಿ ಪುಷ್ಪಾರ್ಚನೆ ಸಮಾರಂಭವನ್ನು ನಡೆಸುವುದರೊಂದಿಗೆ, ಸೇನಾ ಪಡೆ ಈಗ ಅಮರ್ ಜವಾನ್ ಜ್ಯೋತಿಯನ್ನು ಇದರೊಂದಿಗೆ ವಿಲೀನಗೊಳಿಸುತ್ತಿದೆ. ಸ್ವಾತಂತ್ರ್ಯಾ ನಂತರ ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲ ವೀರರ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ.

176 ಕೋಟಿ ರು ವೆಚ್ಚದಲ್ಲಿ 40 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಫೆಬ್ರವರಿ 2019 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಉದ್ಘಾಟನೆಯ ನಂತರ ಇಂಡಿಯಾ ಗೇಟ್‌ನಲ್ಲಿ ನಡೆಯುತ್ತಿದ್ದ ಎಲ್ಲಾ ಮಿಲಿಟರಿ ಸಮಾರಂಭಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಯಿತು.

 

ತಪ್ಪು ಗ್ರಹಿಕೆಗೆ ಕೇಂದ್ರದ ಸ್ಪಷ್ಟೀಕರಣ: ಅಮರ್ ಜವಾನ್ ಜ್ಯೋತಿಯನ್ನು ಆರಿಸಲಾಗುತ್ತಿದೆ ಎನ್ನುವ ತಪ್ಪುಗ್ರಹಿಕೆಗೆ ಕೇಂದ್ರ ಸ್ಪಷ್ಟೀಕರಣ ನೀಡಿದ್ದು, ಇದನ್ನು ಯುದ್ಧಸ್ಮಾರಕದ ಜ್ಯೋತಿಯೊಂದಿಗೆ ವಿಲೀನಗೊಳಿಸಲಾಗುತ್ತಿದೆ ಎಂದು ಹೇಳಿದೆ. 1971 ಹಾಗೂ ಇತರ ಕೆಲವು ಯುದ್ಧಗಳಲ್ಲಿ ಮಡಿದ ಸೈನಿಕರ ಹೆಸರು ಮಾತ್ರವೇ ಅಮರ್ ಜವಾನ್ ಜ್ಯೋತಿಯ ಬಳಿಯಲ್ಲಿದೆ. ಆದರೆ, ಯುದ್ಧ ಸ್ಮಾರಕದಲ್ಲಿ ಈವರೆಗೂ ಎಲ್ಲಾ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಹೆಸರುಗಳಿದೆ. ಆ ಕಾರಣದಿಂದಾಗಿ ಜ್ಯೋತಿ ಅಲ್ಲಿರುವುದೇ ಸೂಕ್ತ ಎಂದು ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಿದೆ. ತಾನು ಅಧಿಕಾರದಲ್ಲಿದ್ದ ವೇಳೆ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣ ಮಾಡಬೇಕು ಎನ್ನುವ ಯೋಚನೆಯನ್ನೇ ಹೊಂದಿರದ, 7 ದಶಕಗಳ ಕಾಲ ಸುಮ್ಮನೆ ಕುಳಿತಿದ್ದ ಪಕ್ಷದಿಂದ ನಾವು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago