Featured

ರಾಷ್ಟ್ರೀಯ ರೈತ ದಿನಾಚರಣೆ : ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ -Vishwanews24

ರಾಷ್ಟ್ರೀಯ ರೈತ ದಿನಾಚರಣೆ : ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ -Vishwanews24

ನವದೆಹಲಿ : ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಇಂದು ದೇಶದಲ್ಲಿ ಜೈವಿಕ ಕೃಷಿ ಪದ್ಧತಿಗೆ ಹೆಚ್ಚು ಪ್ರಾಧಾನ್ಯತೆ ನೀಡುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಶ್ರೀ ಡಿ ವಿ ಸದಾನಂದಗೌಡ ಅವರನ್ನು ಅವಧೂತ ಶ್ರೀ ವಿನಯ್ ಗುರೂಜಿ ಅವರು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ನವದೆಹಲಿ ನಿವಾಸದಲ್ಲಿ ಸದಾನಂದಗೌಡ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರೈತ ದಿನದ ಶುಭಾಶಯ ತಿಳಿಸಿ, ರೈತರ ಹಿತ ಚಿಂತನೆಗಳ ಬಗ್ಗೆ ಚರ್ಚಿಸಲಾಯಿತು.

ದೇಶದಲ್ಲಿ ಆಧುನಿಕ ಮತ್ತು ಅಧಿಕ ಇಳುವರಿ ಹೆಸರಿನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಅಧಿಕ ಬಳಕೆ ಆಗುತ್ತಿದ್ದು ಅದು ಇಂದಿನ ಮಾನವನ ಜೀವನ ಶೈಲಿಯಲ್ಲಿ ವ್ಯತಿರಿಕ್ತ ಪರಿಣಾಮ ಬಿರುತ್ತಿದ್ದು, ಮಾನವನ ಆರೋಗ್ಯದ ಏರುಪೇರಾಗಿ ಕ್ಯಾನ್ಸರ್, ಬಿಪಿ, ಸಕ್ಕರೆ ಕಾಯಿಲೆ ಅಂತಹ ಕಾಯಿಲೆಗಳಿಗೆ ತುತ್ತಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ.

ರಾಸಾಯನಿಕ ವಸ್ತುಗಳನ್ನು ಬಳಸಿ ಬೆಳೆಯುವ ಆಹಾರ ಪದ್ಧತಿಯಿಂದ ಮಾನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ. ನಮ್ಮ ಪುರಾತನ ದಿನಗಳಲ್ಲಿ ಸನಾತನ ಧರ್ಮದ ಪದ್ಧತಿಯಂತೆ ಜೈವಿಕ ಕೃಷಿ ಪದ್ಧತಿ ದೇಶದಲ್ಲಿ ಇಂದು ಅತಿ ಅವಶ್ಯಕವಾಗಿದೆ.

ಜೈವಿಕ ಕೃಷಿ ಪದ್ಧತಿಯಿಂದ ನಮ್ಮ ದೇಶ ಗೋವಿನ ಉಳಿವು ಹಾಗೂ ಅದರ ಗೊಬ್ಬರದಿಂದ ಮಾಡುವ ಕೃಷಿ ಪದ್ದತಿಯು ಮಾನವನ ಆರೋಗ್ಯಕ್ಕೆ ತುಂಬಾ ಒಳ್ಳೆಯ ಹಾಗೂ ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ.

ದೇಶಿಯ ತಳಿಯ ಗೋವುಗಳ ಸಂರಕ್ಷಣೆಯಾಗಿ ದೇಶ ಹೆಚ್ಚು ಸಮೃದ್ಧಿಯಾಗುತ್ತದೆ. ಗೋವಿನ ಬೆರಣಿಯಿಂದ ಅಗ್ನಿಹೋತ್ರ ಮಾಡುವುದರಿಂದ ವಾತಾವರಣ ಶುದ್ದಿ ಆಗುವುದರ ಜೊತೆಗೆ ವಾತವರಣದಲ್ಲಿ ಇರುವ ಕೆಲವೊಂದು ಮಾರಕ ವೈರಾಣುಗಳು ಕ್ಷೀಣಿಸಿ ಮಾನವನ ಜೀವನಕ್ಕೆ ಒಳ್ಳೆಯ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಅವಧೂತ ಶ್ರೀ ವಿನಯ್ ಗುರೂಜಿ ಅವರು ಮನವಿ ಸಲ್ಲಿಸಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರ ಗಮನಕ್ಕೆ ತರವಂತೆ ಪತ್ರ ಸಲ್ಲಿಸಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago