Featured

ರಾಷ್ಟ್ರೀಯ ರೈತ ದಿನಾಚರಣೆ : ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ -Vishwanews24

ರಾಷ್ಟ್ರೀಯ ರೈತ ದಿನಾಚರಣೆ : ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ -Vishwanews24

ನವದೆಹಲಿ : ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಇಂದು ದೇಶದಲ್ಲಿ ಜೈವಿಕ ಕೃಷಿ ಪದ್ಧತಿಗೆ ಹೆಚ್ಚು ಪ್ರಾಧಾನ್ಯತೆ ನೀಡುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಶ್ರೀ ಡಿ ವಿ ಸದಾನಂದಗೌಡ ಅವರನ್ನು ಅವಧೂತ ಶ್ರೀ ವಿನಯ್ ಗುರೂಜಿ ಅವರು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ನವದೆಹಲಿ ನಿವಾಸದಲ್ಲಿ ಸದಾನಂದಗೌಡ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರೈತ ದಿನದ ಶುಭಾಶಯ ತಿಳಿಸಿ, ರೈತರ ಹಿತ ಚಿಂತನೆಗಳ ಬಗ್ಗೆ ಚರ್ಚಿಸಲಾಯಿತು.

ದೇಶದಲ್ಲಿ ಆಧುನಿಕ ಮತ್ತು ಅಧಿಕ ಇಳುವರಿ ಹೆಸರಿನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಅಧಿಕ ಬಳಕೆ ಆಗುತ್ತಿದ್ದು ಅದು ಇಂದಿನ ಮಾನವನ ಜೀವನ ಶೈಲಿಯಲ್ಲಿ ವ್ಯತಿರಿಕ್ತ ಪರಿಣಾಮ ಬಿರುತ್ತಿದ್ದು, ಮಾನವನ ಆರೋಗ್ಯದ ಏರುಪೇರಾಗಿ ಕ್ಯಾನ್ಸರ್, ಬಿಪಿ, ಸಕ್ಕರೆ ಕಾಯಿಲೆ ಅಂತಹ ಕಾಯಿಲೆಗಳಿಗೆ ತುತ್ತಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ.

ರಾಸಾಯನಿಕ ವಸ್ತುಗಳನ್ನು ಬಳಸಿ ಬೆಳೆಯುವ ಆಹಾರ ಪದ್ಧತಿಯಿಂದ ಮಾನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ. ನಮ್ಮ ಪುರಾತನ ದಿನಗಳಲ್ಲಿ ಸನಾತನ ಧರ್ಮದ ಪದ್ಧತಿಯಂತೆ ಜೈವಿಕ ಕೃಷಿ ಪದ್ಧತಿ ದೇಶದಲ್ಲಿ ಇಂದು ಅತಿ ಅವಶ್ಯಕವಾಗಿದೆ.

ಜೈವಿಕ ಕೃಷಿ ಪದ್ಧತಿಯಿಂದ ನಮ್ಮ ದೇಶ ಗೋವಿನ ಉಳಿವು ಹಾಗೂ ಅದರ ಗೊಬ್ಬರದಿಂದ ಮಾಡುವ ಕೃಷಿ ಪದ್ದತಿಯು ಮಾನವನ ಆರೋಗ್ಯಕ್ಕೆ ತುಂಬಾ ಒಳ್ಳೆಯ ಹಾಗೂ ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ.

ದೇಶಿಯ ತಳಿಯ ಗೋವುಗಳ ಸಂರಕ್ಷಣೆಯಾಗಿ ದೇಶ ಹೆಚ್ಚು ಸಮೃದ್ಧಿಯಾಗುತ್ತದೆ. ಗೋವಿನ ಬೆರಣಿಯಿಂದ ಅಗ್ನಿಹೋತ್ರ ಮಾಡುವುದರಿಂದ ವಾತಾವರಣ ಶುದ್ದಿ ಆಗುವುದರ ಜೊತೆಗೆ ವಾತವರಣದಲ್ಲಿ ಇರುವ ಕೆಲವೊಂದು ಮಾರಕ ವೈರಾಣುಗಳು ಕ್ಷೀಣಿಸಿ ಮಾನವನ ಜೀವನಕ್ಕೆ ಒಳ್ಳೆಯ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಅವಧೂತ ಶ್ರೀ ವಿನಯ್ ಗುರೂಜಿ ಅವರು ಮನವಿ ಸಲ್ಲಿಸಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರ ಗಮನಕ್ಕೆ ತರವಂತೆ ಪತ್ರ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

3 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

4 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

5 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

6 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

7 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

7 hours ago