ನವದೆಹಲಿ : ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಇಂದು ದೇಶದಲ್ಲಿ ಜೈವಿಕ ಕೃಷಿ ಪದ್ಧತಿಗೆ ಹೆಚ್ಚು ಪ್ರಾಧಾನ್ಯತೆ ನೀಡುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಶ್ರೀ ಡಿ ವಿ ಸದಾನಂದಗೌಡ ಅವರನ್ನು ಅವಧೂತ ಶ್ರೀ ವಿನಯ್ ಗುರೂಜಿ ಅವರು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ನವದೆಹಲಿ ನಿವಾಸದಲ್ಲಿ ಸದಾನಂದಗೌಡ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರೈತ ದಿನದ ಶುಭಾಶಯ ತಿಳಿಸಿ, ರೈತರ ಹಿತ ಚಿಂತನೆಗಳ ಬಗ್ಗೆ ಚರ್ಚಿಸಲಾಯಿತು.
ದೇಶದಲ್ಲಿ ಆಧುನಿಕ ಮತ್ತು ಅಧಿಕ ಇಳುವರಿ ಹೆಸರಿನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಅಧಿಕ ಬಳಕೆ ಆಗುತ್ತಿದ್ದು ಅದು ಇಂದಿನ ಮಾನವನ ಜೀವನ ಶೈಲಿಯಲ್ಲಿ ವ್ಯತಿರಿಕ್ತ ಪರಿಣಾಮ ಬಿರುತ್ತಿದ್ದು, ಮಾನವನ ಆರೋಗ್ಯದ ಏರುಪೇರಾಗಿ ಕ್ಯಾನ್ಸರ್, ಬಿಪಿ, ಸಕ್ಕರೆ ಕಾಯಿಲೆ ಅಂತಹ ಕಾಯಿಲೆಗಳಿಗೆ ತುತ್ತಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ.
ರಾಸಾಯನಿಕ ವಸ್ತುಗಳನ್ನು ಬಳಸಿ ಬೆಳೆಯುವ ಆಹಾರ ಪದ್ಧತಿಯಿಂದ ಮಾನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ. ನಮ್ಮ ಪುರಾತನ ದಿನಗಳಲ್ಲಿ ಸನಾತನ ಧರ್ಮದ ಪದ್ಧತಿಯಂತೆ ಜೈವಿಕ ಕೃಷಿ ಪದ್ಧತಿ ದೇಶದಲ್ಲಿ ಇಂದು ಅತಿ ಅವಶ್ಯಕವಾಗಿದೆ.
ಜೈವಿಕ ಕೃಷಿ ಪದ್ಧತಿಯಿಂದ ನಮ್ಮ ದೇಶ ಗೋವಿನ ಉಳಿವು ಹಾಗೂ ಅದರ ಗೊಬ್ಬರದಿಂದ ಮಾಡುವ ಕೃಷಿ ಪದ್ದತಿಯು ಮಾನವನ ಆರೋಗ್ಯಕ್ಕೆ ತುಂಬಾ ಒಳ್ಳೆಯ ಹಾಗೂ ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ.
ದೇಶಿಯ ತಳಿಯ ಗೋವುಗಳ ಸಂರಕ್ಷಣೆಯಾಗಿ ದೇಶ ಹೆಚ್ಚು ಸಮೃದ್ಧಿಯಾಗುತ್ತದೆ. ಗೋವಿನ ಬೆರಣಿಯಿಂದ ಅಗ್ನಿಹೋತ್ರ ಮಾಡುವುದರಿಂದ ವಾತಾವರಣ ಶುದ್ದಿ ಆಗುವುದರ ಜೊತೆಗೆ ವಾತವರಣದಲ್ಲಿ ಇರುವ ಕೆಲವೊಂದು ಮಾರಕ ವೈರಾಣುಗಳು ಕ್ಷೀಣಿಸಿ ಮಾನವನ ಜೀವನಕ್ಕೆ ಒಳ್ಳೆಯ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಅವಧೂತ ಶ್ರೀ ವಿನಯ್ ಗುರೂಜಿ ಅವರು ಮನವಿ ಸಲ್ಲಿಸಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರ ಗಮನಕ್ಕೆ ತರವಂತೆ ಪತ್ರ ಸಲ್ಲಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…