ಬೆಂಗಳೂರು, : ಬುಧವಾರ ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕಳೆದ 28 ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲ್ಲೇ ಇದ್ದಾರೆ. ಕೇಂದ್ರ ಹಾಗೂ ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ. ನಮ್ಮ ಕಾಂಗ್ರೆಸ್ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಕರೆ ನೀಡಿದ್ದಾರೆ.
ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…