ಬೆಂಗಳೂರು, : ಬುಧವಾರ ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕಳೆದ 28 ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲ್ಲೇ ಇದ್ದಾರೆ. ಕೇಂದ್ರ ಹಾಗೂ ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ. ನಮ್ಮ ಕಾಂಗ್ರೆಸ್ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಕರೆ ನೀಡಿದ್ದಾರೆ.
ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…