ಬೆಂಗಳೂರು, : ಬುಧವಾರ ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕಳೆದ 28 ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲ್ಲೇ ಇದ್ದಾರೆ. ಕೇಂದ್ರ ಹಾಗೂ ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ. ನಮ್ಮ ಕಾಂಗ್ರೆಸ್ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಕರೆ ನೀಡಿದ್ದಾರೆ.
ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…