Featured

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಬೆಳ್ತಂಗಡಿಯ ಯಾಕೂಬ್ ಸೇರಿ ರಾಜ್ಯದ ಮೂರು ಶಿಕ್ಷಕರು ಆಯ್ಕೆ -Vishwanews24

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಬೆಳ್ತಂಗಡಿಯ ಯಾಕೂಬ್ ಸೇರಿ ರಾಜ್ಯದ ಮೂರು ಶಿಕ್ಷಕರು ಆಯ್ಕೆ -Vishwanews24

ಬೆಳ್ತಂಗಡಿ: ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್‌‌‌ ಎಸ್‌ ಸೇರಿದಂತೆ ರಾಜ್ಯದ ಮೂವರು ಶಿಕ್ಷಕರನ್ನು ಕೇಂದ್ರ ಶಿಕ್ಷಣ ಸಚಿವಾಲಯವು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಕಲಬುರ್ಗಿ ಜಿಲ್ಲೆಯ ಅಫ್ಜಲ್‌‌‌ಪುರ ಸರ್ಕಾರಿ ಪ್ರೌಢಸಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್‌‌ ಹಾಗೂ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್‌‌‌ ಷಣ್ಮುಖಂ ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗೆ ದೇಶಾದ್ಯಂತ ಒಟ್ಟು 47 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಯಾಕುಬ್ ಅವರು ಶಿಕ್ಷಕರಾಗಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗಣಿತವನ್ನು ಸುಲಭವಾಗಿ ಕಲಿಯುವ ನಿಟ್ಟಿನಲ್ಲಿ ಸ್ಥಳೀಯರ ಸಹಾಯದಿಂದ ಗಣಿತ ಪ್ರಯೋಗಾಲಯವನ್ನು ಪ್ರಾರಂಭಿಸಿದ್ದು, ಶಿಕ್ಷಣ ಇಲಾಖೆಯ ಗಮನ ಸೆಳೆದಿದ್ದರು. ಯಾಕೂಬ್‌ ಅವರು ಮಾಡಿರುವ ಈ ಕಾರ್ಯ ರಾಜ್ಯಾದ್ಯಂತ ಗಮನ ಸೆಳೆದಿದ್ದು, ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನೂ ನೀಡಲಾಯಿತು.

1996 ರಲ್ಲಿ ಯಾಕೂಬ್‌ ಅವರು ತಮ್ಮ ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು. ಅಂದಿನಿಂದ ಅವರು ಬೋಧಿಸುತ್ತಿರುವ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಯಾಕೂಬ್‌‌ ಅವರು ಮಾಡಿದ ಸರಳ ಗಣಿತ ಬೋಧನೆಯ 300 ಕ್ಕೂ ಹೆಚ್ಚು ವೀಡಿಯೊಗಳು ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಯಾಕೂಬ್ ಅವರು ಕೊಯ್ಯೂರು ಉನ್ನಲು ನಿವಾಸಿಗಳಾದ ಇಸುಬು ಬ್ಯಾರಿ ಮತ್ತು ಅಲಿಮ್ಮಮ್ಮ ದಂಪತಿಯ ಪುತ್ರ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಊರಿನ ಶಾಲೆಯಲ್ಲಿ ಪೂರೈಸಿದರು. ನಂತರ ಇವರು ಮಂಗಳೂರಿನ ಸರ್ಕಾರಿ ಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದರು ಹಾಗೂ ನಡಾ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇವರು 2007 ರಿಂದ 2012 ರವರೆಗೆ ಅಕ್ಷರಾ ದಾಸೋಹಾ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

35 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

41 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

48 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago