ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24
ಪಡುಬಿದ್ರಿ:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಡಾಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ವಲಯಾರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ನಿರ್ದೇಶನದಂತೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆಯನ್ನು ನೀಡಿದರು.
ಬಳಿಕ ಪ್ರತಿಕ್ರಿಯಿಸಿ ಮಾತನಾಡುತ್ತಾ ಸುಮಾರು 4 ವರ್ಷಗಳ ಅವಧಿಯಲ್ಲಿ ಕಾಪು ತಾಲೂಕಿನಾದ್ಯಂತ 30 ಗ್ರಾಮಗಳ ವ್ಯಾಪ್ತಿಯಲ್ಲಿ ನೆಡಲಾಗಿರುವ ಬೇವು, ಬೇಂಗ, ನಾಗಸಂಪಿಗೆ, ಹಲಸು, ಹೆಬ್ಬಲಸು ಸಹಿತ ಇತರೇ ಉಪಯುಕ್ತವಾದ ಹಣ್ಣು ಹಂಪಲು, ಔಷಧೀಯ ಗಿಡಗಳಲ್ಲಿ ಶೇ. 92 ಅಂಶ ಫಲಪ್ರದವಾಗಿದೆ. ಈ ಬಾರಿ ಒಟ್ಟು ಐದು ಸಾವಿರ ಗಿಡಗಳನ್ನು ಸಾರ್ವಜನಿಕರ ಸಹಭಾಗಿತ್ವ ಸಹಿತ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ನೆಡಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಕೃಷಿ ಅರಣ್ಯ ಯೋಜನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ. ಅರಣ್ಯ ರಕ್ಷಕರ ಪರಿಶ್ರಮವೂ ಅಪಾರವಾಗಿದ್ದು, ಸಾರ್ವಜನಿಕರ ಸಹಕಾರದಿಂದ ಪರಿಸರದ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಪ್ರಮುಖರಾದ ಉದಯ ಕುಮಾರ್, ಗ್ರೆಗೊರಿ ಲೂಯಿಸ್ ಕ್ವಾಡ್ರಸ್, ಅರಣ್ಯ ರಕ್ಷಕರುಗಳಾದ ಅಭಿಲಾಷ್, ಜಯರಾಮ ಶೆಟ್ಟಿ, ಮಂಜುನಾಥ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು
