ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24

ಪಡುಬಿದ್ರಿ:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಡಾಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ವಲಯಾರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ನಿರ್ದೇಶನದಂತೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆಯನ್ನು ನೀಡಿದರು.
ಬಳಿಕ ಪ್ರತಿಕ್ರಿಯಿಸಿ ಮಾತನಾಡುತ್ತಾ ಸುಮಾರು 4 ವರ್ಷಗಳ ಅವಧಿಯಲ್ಲಿ ಕಾಪು ತಾಲೂಕಿನಾದ್ಯಂತ 30 ಗ್ರಾಮಗಳ ವ್ಯಾಪ್ತಿಯಲ್ಲಿ ನೆಡಲಾಗಿರುವ ಬೇವು, ಬೇಂಗ, ನಾಗಸಂಪಿಗೆ, ಹಲಸು, ಹೆಬ್ಬಲಸು ಸಹಿತ ಇತರೇ ಉಪಯುಕ್ತವಾದ ಹಣ್ಣು ಹಂಪಲು, ಔಷಧೀಯ ಗಿಡಗಳಲ್ಲಿ ಶೇ. 92 ಅಂಶ ಫಲಪ್ರದವಾಗಿದೆ. ಈ ಬಾರಿ ಒಟ್ಟು ಐದು ಸಾವಿರ ಗಿಡಗಳನ್ನು ಸಾರ್ವಜನಿಕರ ಸಹಭಾಗಿತ್ವ ಸಹಿತ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ನೆಡಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಕೃಷಿ ಅರಣ್ಯ ಯೋಜನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ. ಅರಣ್ಯ ರಕ್ಷಕರ ಪರಿಶ್ರಮವೂ ಅಪಾರವಾಗಿದ್ದು, ಸಾರ್ವಜನಿಕರ ಸಹಕಾರದಿಂದ ಪರಿಸರದ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಪ್ರಮುಖರಾದ ಉದಯ ಕುಮಾರ್, ಗ್ರೆಗೊರಿ ಲೂಯಿಸ್ ಕ್ವಾಡ್ರಸ್, ಅರಣ್ಯ ರಕ್ಷಕರುಗಳಾದ ಅಭಿಲಾಷ್, ಜಯರಾಮ ಶೆಟ್ಟಿ, ಮಂಜುನಾಥ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago