ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24

ಪಡುಬಿದ್ರಿ:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಡಾಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ವಲಯಾರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ನಿರ್ದೇಶನದಂತೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆಯನ್ನು ನೀಡಿದರು.
ಬಳಿಕ ಪ್ರತಿಕ್ರಿಯಿಸಿ ಮಾತನಾಡುತ್ತಾ ಸುಮಾರು 4 ವರ್ಷಗಳ ಅವಧಿಯಲ್ಲಿ ಕಾಪು ತಾಲೂಕಿನಾದ್ಯಂತ 30 ಗ್ರಾಮಗಳ ವ್ಯಾಪ್ತಿಯಲ್ಲಿ ನೆಡಲಾಗಿರುವ ಬೇವು, ಬೇಂಗ, ನಾಗಸಂಪಿಗೆ, ಹಲಸು, ಹೆಬ್ಬಲಸು ಸಹಿತ ಇತರೇ ಉಪಯುಕ್ತವಾದ ಹಣ್ಣು ಹಂಪಲು, ಔಷಧೀಯ ಗಿಡಗಳಲ್ಲಿ ಶೇ. 92 ಅಂಶ ಫಲಪ್ರದವಾಗಿದೆ. ಈ ಬಾರಿ ಒಟ್ಟು ಐದು ಸಾವಿರ ಗಿಡಗಳನ್ನು ಸಾರ್ವಜನಿಕರ ಸಹಭಾಗಿತ್ವ ಸಹಿತ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ನೆಡಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಕೃಷಿ ಅರಣ್ಯ ಯೋಜನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ. ಅರಣ್ಯ ರಕ್ಷಕರ ಪರಿಶ್ರಮವೂ ಅಪಾರವಾಗಿದ್ದು, ಸಾರ್ವಜನಿಕರ ಸಹಕಾರದಿಂದ ಪರಿಸರದ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಪ್ರಮುಖರಾದ ಉದಯ ಕುಮಾರ್, ಗ್ರೆಗೊರಿ ಲೂಯಿಸ್ ಕ್ವಾಡ್ರಸ್, ಅರಣ್ಯ ರಕ್ಷಕರುಗಳಾದ ಅಭಿಲಾಷ್, ಜಯರಾಮ ಶೆಟ್ಟಿ, ಮಂಜುನಾಥ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago