ಕಾಪು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ / ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕಾಪು ಪುರಸಭಾ ಚುನಾವಣೆಯ ಪ್ರಯುಕ್ತ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿ ಮಾದರಿಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುತ್ತಿದ್ದು ಎಲ್ಲಾ ಪಕ್ಷಗಳಿಗೂ ಪರ್ಯಾಯವಾಗಿ ಅಲ್ಲಿ ಬಿಜೆಪಿಬೆಳೆಯುತ್ತಿದೆ. ಅಲ್ಲಿನ ಹಲವು ಮಂದಿ ಐಎಎಸ್, ಐಪಿಎಸ್ಅಧಿಕಾರಿಗಳ ಸಹಿತವಾಗಿ ವಿವಿಧ ಅಧಿಕಾರಿಗಳು ಮತ್ತು ಮಾಜಿ ಶಾಸಕ,ಸಂಸದರ ಸಹಿತವಾಗಿ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಐಪಿಎಸ್ ವೃತ್ತಿಗೆ ರಾಜೀನಾಮೆ ನೀಡಿದ ರಾಷ್ಟ್ರೀಯತೆಯ ಬಗ್ಗೆ ಒಲವು ತೋರಿಸಿ ಬಿಜೆಪಿಗೆ ಸೇರಿದ್ದು, ರಾಷ್ಟ್ರೀ ಯತೆಯನ್ನು ಉಳಿಸ,ಬೆಳೆಸಲು ಬಿಜೆಪಿಯಿಂದ ಮಾತ್ರಾ ಸಾಧ್ಯ. ಬಿಜೆಪಿಯಲ್ಲಿ ಮಾತ್ರಾ ಸಂಘಟನಾತ್ಮಕ ವಿಚಾರಗಳು, ಹೊಸ ನಾಯಕರ ಸೃಷ್ಠಿ ಮತ್ತುಯುವಕರ ಬೆಂಬಲ ಪಡೆಯಲು ಸಾಧ್ಯವಿದೆ. ಅದಕ್ಕೇ ಅನುಗುಣವಾಗಿ ನರೇಂದ್ರ ಮೋದಿಯವರ ನೇತೃತ್ವವೂ ಬಿಜೆಪಿಗೆ ವಿಶೇಷಬಲವನ್ನು ತುಂಬಿದೆ. ಎಲ್ಲರೂ ಜೊತೆಗೂಡಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸೋಣ ಎಂದರು.
ಕೇAದ್ರ ಮತ್ತು ರಾಜ್ಯದಲ್ಲಿ ಡಬ್ಬಲ್ ಇಂಜಿನ್ ಮೋಡ್ನಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದು ಎರಡೂ ಸರಕಾರಕ್ಕೆ ಮತ್ತಷ್ಟುಬಲ ಬರಬೇಕಾದರೆ ಹಳ್ಳಿ ಹಳ್ಳಿಗಳಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಕಡೆಗಳಲ್ಲೂ ಬಿಜೆಪಿ ಆಡಳಿವಿದ್ದು, ಕಾಪು ಪುರಸಭೆಯಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಅಭ್ಯರ್ಥಿಗಳು ಯಾರೇ ಇರಲಿ, ಪಕ್ಷದ ಗೆಲುವೊಂದೇ ನಮ್ಮ
ಗುರಿ ಎಂಬ ಧ್ಯೇ ಯದೊಂದಿಗೆ ಕಾರ್ಯಕರ್ತರು ಹಗಲಿರುಳು ಶ್ರಮ ವಹಿಸಿ, ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…