ಮಂಗಳೂರಿನ ಭಯಸಿಂಹ ನಿರ್ದೇಶನದ ತುಳು ಸಿನೆಮಾವೊಂದು ನ್ಯೂಯಾರ್ಕ್ನಿಂದ ಸದ್ದು ಮಾಡುತ್ತಿದೆ.
ಚಿತ್ರದ ಹೆಸರು ‘ಪಡ್ಡಾಯಿ’. ಪಕ್ಕಾ ತುಳುನಾಡಿನ ಕಥೆಯೊಂದನ್ನು ಇಟ್ಟುಕೊಂಡು ಶೇಕ್ಸ್ಪಿಯರ್ನ ಪ್ರಸಿದ್ಧ ಕೃತಿ ಮ್ಯಾಕ್ಬೆತ್ ನಾಟಕದಿಂದ ಸ್ಫೂರ್ತಿ ಪಡೆದು ಈ ಚಿತ್ರವನ್ನು ಮಾಡಲಾಗಿದೆ. ತುಳುನಾಡಿನ ಮೊಗವೀರ ಸಮುದಾಯದ ಬದುಕು ಬವಣೆಯನ್ನು ಈ ಸಿನೆಮಾದ ಮೂಲಕ ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಅದರಲ್ಲೂ ತುಳುನಾಡಿನ ನೇಮ, ಕೋಲ, ಯಕ್ಷಗಾನ ಸಹಿತ ಎಲ್ಲ ಪ್ರಕಾರಗಳು ಈ ಸಿನೆಮಾದಲ್ಲಿ ಹಾದುಹೋಗುತ್ತವೆ. ಹೀಗಾಗಿ ಪಕ್ಕಾ ತುಳುನಾಡಿನ ಕಥೆಯಾಧಾರಿತವಾಗಿ ಪಡ್ಡಾಯಿ ಮಾಡಲಾಗಿದೆ.
ನಿತ್ಯಾನಂದ ಪೈ ಸಿನೆಮಾ ನಿರ್ಮಿಸಿದ್ದು, ಕದ್ರಿ ಮಣಿಕಾಂತ್ ಸಂಗೀತದಲ್ಲಿ ಕೈ ಜೋಡಿಸಿದ್ದಾರೆ. ಮೇ 7ರಿಂದ 12ರವರೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪಡ್ಡಾಯಿ ಸಿನೆಮಾ ಪ್ರದರ್ಶನಕ್ಕೆ ಅವಕಾಶ ಪಡೆದಿದೆ.
ರಂಗಭೂಮಿಯಲ್ಲಿ ಬಹಳಷ್ಟು ಹೆಸರು ಪಡೆದ ಮೋಹನ್ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್ ಭಟ್, ಚಂದ್ರಹಾಸ್ ಉಳ್ಳಾಲ್, ಅವಿನಾಶ್, ಪ್ರಭಾಕರ ಕಾಪಿಕಾಡ್, ರವಿ ಭಟ್, ಸದಾಶಿವ, ಸಂತೋಷ್ ಶೆಟ್ಟಿ, ಶ್ರೀನಿಧಿ ಆಚಾರ್, ವಾಣಿ, ಮಲ್ಲಿಕಾ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯಲ್ಲಿ ಈ ಸಿನೆಮಾ ಯಾವಾಗ ರಿಲೀಸ್ ಎಂಬುದಕ್ಕೆ ಸದ್ಯಕ್ಕೆ ಉತ್ತರ ದೊರಕಿಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…