ಮಂಗಳೂರಿನ ಭಯಸಿಂಹ ನಿರ್ದೇಶನದ ತುಳು ಸಿನೆಮಾವೊಂದು ನ್ಯೂಯಾರ್ಕ್ನಿಂದ ಸದ್ದು ಮಾಡುತ್ತಿದೆ.
ಚಿತ್ರದ ಹೆಸರು ‘ಪಡ್ಡಾಯಿ’. ಪಕ್ಕಾ ತುಳುನಾಡಿನ ಕಥೆಯೊಂದನ್ನು ಇಟ್ಟುಕೊಂಡು ಶೇಕ್ಸ್ಪಿಯರ್ನ ಪ್ರಸಿದ್ಧ ಕೃತಿ ಮ್ಯಾಕ್ಬೆತ್ ನಾಟಕದಿಂದ ಸ್ಫೂರ್ತಿ ಪಡೆದು ಈ ಚಿತ್ರವನ್ನು ಮಾಡಲಾಗಿದೆ. ತುಳುನಾಡಿನ ಮೊಗವೀರ ಸಮುದಾಯದ ಬದುಕು ಬವಣೆಯನ್ನು ಈ ಸಿನೆಮಾದ ಮೂಲಕ ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಅದರಲ್ಲೂ ತುಳುನಾಡಿನ ನೇಮ, ಕೋಲ, ಯಕ್ಷಗಾನ ಸಹಿತ ಎಲ್ಲ ಪ್ರಕಾರಗಳು ಈ ಸಿನೆಮಾದಲ್ಲಿ ಹಾದುಹೋಗುತ್ತವೆ. ಹೀಗಾಗಿ ಪಕ್ಕಾ ತುಳುನಾಡಿನ ಕಥೆಯಾಧಾರಿತವಾಗಿ ಪಡ್ಡಾಯಿ ಮಾಡಲಾಗಿದೆ.
ನಿತ್ಯಾನಂದ ಪೈ ಸಿನೆಮಾ ನಿರ್ಮಿಸಿದ್ದು, ಕದ್ರಿ ಮಣಿಕಾಂತ್ ಸಂಗೀತದಲ್ಲಿ ಕೈ ಜೋಡಿಸಿದ್ದಾರೆ. ಮೇ 7ರಿಂದ 12ರವರೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪಡ್ಡಾಯಿ ಸಿನೆಮಾ ಪ್ರದರ್ಶನಕ್ಕೆ ಅವಕಾಶ ಪಡೆದಿದೆ.
ರಂಗಭೂಮಿಯಲ್ಲಿ ಬಹಳಷ್ಟು ಹೆಸರು ಪಡೆದ ಮೋಹನ್ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್ ಭಟ್, ಚಂದ್ರಹಾಸ್ ಉಳ್ಳಾಲ್, ಅವಿನಾಶ್, ಪ್ರಭಾಕರ ಕಾಪಿಕಾಡ್, ರವಿ ಭಟ್, ಸದಾಶಿವ, ಸಂತೋಷ್ ಶೆಟ್ಟಿ, ಶ್ರೀನಿಧಿ ಆಚಾರ್, ವಾಣಿ, ಮಲ್ಲಿಕಾ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯಲ್ಲಿ ಈ ಸಿನೆಮಾ ಯಾವಾಗ ರಿಲೀಸ್ ಎಂಬುದಕ್ಕೆ ಸದ್ಯಕ್ಕೆ ಉತ್ತರ ದೊರಕಿಲ್ಲ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…