ಮಂಗಳೂರಿನ ಭಯಸಿಂಹ ನಿರ್ದೇಶನದ ತುಳು ಸಿನೆಮಾವೊಂದು ನ್ಯೂಯಾರ್ಕ್ನಿಂದ ಸದ್ದು ಮಾಡುತ್ತಿದೆ.
ಚಿತ್ರದ ಹೆಸರು ‘ಪಡ್ಡಾಯಿ’. ಪಕ್ಕಾ ತುಳುನಾಡಿನ ಕಥೆಯೊಂದನ್ನು ಇಟ್ಟುಕೊಂಡು ಶೇಕ್ಸ್ಪಿಯರ್ನ ಪ್ರಸಿದ್ಧ ಕೃತಿ ಮ್ಯಾಕ್ಬೆತ್ ನಾಟಕದಿಂದ ಸ್ಫೂರ್ತಿ ಪಡೆದು ಈ ಚಿತ್ರವನ್ನು ಮಾಡಲಾಗಿದೆ. ತುಳುನಾಡಿನ ಮೊಗವೀರ ಸಮುದಾಯದ ಬದುಕು ಬವಣೆಯನ್ನು ಈ ಸಿನೆಮಾದ ಮೂಲಕ ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಅದರಲ್ಲೂ ತುಳುನಾಡಿನ ನೇಮ, ಕೋಲ, ಯಕ್ಷಗಾನ ಸಹಿತ ಎಲ್ಲ ಪ್ರಕಾರಗಳು ಈ ಸಿನೆಮಾದಲ್ಲಿ ಹಾದುಹೋಗುತ್ತವೆ. ಹೀಗಾಗಿ ಪಕ್ಕಾ ತುಳುನಾಡಿನ ಕಥೆಯಾಧಾರಿತವಾಗಿ ಪಡ್ಡಾಯಿ ಮಾಡಲಾಗಿದೆ.
ನಿತ್ಯಾನಂದ ಪೈ ಸಿನೆಮಾ ನಿರ್ಮಿಸಿದ್ದು, ಕದ್ರಿ ಮಣಿಕಾಂತ್ ಸಂಗೀತದಲ್ಲಿ ಕೈ ಜೋಡಿಸಿದ್ದಾರೆ. ಮೇ 7ರಿಂದ 12ರವರೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪಡ್ಡಾಯಿ ಸಿನೆಮಾ ಪ್ರದರ್ಶನಕ್ಕೆ ಅವಕಾಶ ಪಡೆದಿದೆ.
ರಂಗಭೂಮಿಯಲ್ಲಿ ಬಹಳಷ್ಟು ಹೆಸರು ಪಡೆದ ಮೋಹನ್ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್ ಭಟ್, ಚಂದ್ರಹಾಸ್ ಉಳ್ಳಾಲ್, ಅವಿನಾಶ್, ಪ್ರಭಾಕರ ಕಾಪಿಕಾಡ್, ರವಿ ಭಟ್, ಸದಾಶಿವ, ಸಂತೋಷ್ ಶೆಟ್ಟಿ, ಶ್ರೀನಿಧಿ ಆಚಾರ್, ವಾಣಿ, ಮಲ್ಲಿಕಾ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯಲ್ಲಿ ಈ ಸಿನೆಮಾ ಯಾವಾಗ ರಿಲೀಸ್ ಎಂಬುದಕ್ಕೆ ಸದ್ಯಕ್ಕೆ ಉತ್ತರ ದೊರಕಿಲ್ಲ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…