Featured

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ನಿಧನ -Vishwanews24

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ನಿಧನ -Vishwanews24

ನವದೆಹಲಿ: ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ಶುಕ್ರವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಮೆದುಳಿಗೆ ಎರಡನೇ ಬಾರಿ ಪಾರ್ಶ್ವವಾಯು(ಬ್ರೈನ್ ಸ್ಟ್ರೋಕ್) ಆದ ನಂತರ ಸುರೇಖಾ ಸಿಕ್ರಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂದು ಬೆಳಗ್ಗೆ ತೀವ್ರ ಹೃದಯಾಘಾತವಾಗಿ ಅಸುನೀಗಿದ್ದಾರೆ ಎಂದು ಅವರ ಸಹಾಯಕ ವಿವೇಕ್ ಸಿದ್ವಾನಿ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೂಡ ಸುರೇಖಾ ಸಿಕ್ರಿಯವರಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ತಮ್ಮ ಆರೋಗ್ಯ ಸಂಪೂರ್ಣ ಗುಣಮುಖವಾಗುವವರೆಗೆ ನಟನೆಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಕಳೆದ ವರ್ಷ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇಂದು ಅವರ ನಿವಾಸದ ಹತ್ತಿರ ಕುಟುಂಬಸ್ಥರು ಮತ್ತು ಆಪ್ತರು ನೆರೆದಿದ್ದು ಕುಟುಂಬಸ್ಥರು ಖಾಸಗಿತನ ಅಪೇಕ್ಷಿಸುತ್ತಿದ್ದಾರೆ ಎಂದು ಅವರ ಸಹಾಯಕ ವಿವೇಕ್ ಸಿದ್ವಾನಿ ತಿಳಿಸಿದ್ದಾರೆ.

ಮೂರು ಬಾರಿ ರಾಷ್ಟ್ರ ಪ್ರಶಸ್ತಿ: ಸುರೇಖಾ ಸಿಕ್ರಿ ಅವರಿಗೆ ಕಳೆದ ವರ್ಷ ಬಡಾಯಿ ಹೊ ಚಿತ್ರಕ್ಕೆ ಉತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಗಳಿಸಿದ್ದರು. 1988ರಲ್ಲಿ ತಮಾಸ್ ಹಾಗೂ 1995ರಲ್ಲಿ ಮಮ್ಮೊ ಚಿತ್ರಕ್ಕೆ ಸಹ ರಾಷ್ಟ್ರಪ್ರಶಸ್ತಿ ಗಳಿಸಿದ್ದರು. ರಾಷ್ಟ್ರೀಯ ನಾಟಕ ಅಕಾಡೆಮಿಯಲ್ಲಿ ಪದವಿ ಗಳಿಸಿದ್ದ ಸುರೇಖಾ ಸಿಕ್ರಿ ಅವರಿಗೆ 1989ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಕೂಡ ಬಂದಿತ್ತು.

ಹಿಂದಿ ಧಾರಾವಾಹಿ ಲೋಕದ ಜನಪ್ರಿಯ ಧಾರಾವಾಹಿ ‘ಬಾಲಿಕ ವಧು’ ಮೂಲಕ ಕಿರುತೆರೆಯಲ್ಲಿ ಕೂಡ ಸುರೇಖಾ ಸಿಕ್ರಿ ಜನಪ್ರಿಯರಾಗಿದ್ದರು. ಇನ್ನು ಹಿರಿತೆರೆಯಲ್ಲಿ ಜುಬೇಡಾ, ಮಿ ಅಂಡ್ ಮಿಸ್ಸಸ್ ಅಯ್ಯರ್ ಮತ್ತು ರೈನ್ ಕೋಟ್ ಚಿತ್ರಗಳಲ್ಲಿ ಕೂಡ ಅವರ ನಟನೆ ಅತ್ಯಂತ ಜನಪ್ರಿಯವಾಗಿತ್ತು. ‘ಏಕ್ ಥಾ ರಾಜ ಏಕ್ ಥಿ ರಾಣಿ’, ‘ಪಾರ್ಡೆಸ್ ಮೇ ಹೈ ಮೇರಾ ದಿಲ್’, ‘ಮಾ ಎಕ್ಸ್ ಚೇಂಜ್’, ‘ಸಾತ್ ಪೆರೆ’ ಮತ್ತು ‘ಬಾಲಿಕಾ ವಧು’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅವರು ಕೊನೆಯದಾಗಿ ನಟಿಸಿದ ಚಿತ್ರ ಘೋಸ್ಟ್ ಸ್ಟೋರೀಸ್ ಜೋಯಾ ಅಖ್ತರ್ ನಿರ್ದೇಶಿಸಿದ್ದು ನೆಟ್ಲ್ಫಿಕ್ಸ್ ನಲ್ಲಿ ಪ್ರಸಾರವಾಗಿತ್ತು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

17 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

19 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

19 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

19 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

19 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

19 hours ago