ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ. ಈ ನಡುವೆ ರಾಸಲೀಲೆಯ ವಿಡಿಯೋ ವೈರಲ್ ಆಗಿದರೋದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…