ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆರಂಭವಾಗಿದ್ದು ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ” ಎಂದು ಹೇಳಿದ್ದಾರೆ.
ಹಾಗೆಯೇ ”ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು” ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…