Featured

ರಾಹುಲ್‌ ಗಾಂಧಿ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ : ಎಚ್‌ ಡಿ ದೇವೇಗೌಡ -Vishwanews24

ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್‌ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್‌ ಡಿ ದೇವೇಗೌಡ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.

ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.

ಒಂದೊಮ್ಮೆ ರಾಹುಲ್‌ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago