ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.
ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.
ಒಂದೊಮ್ಮೆ ರಾಹುಲ್ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…