ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.
ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.
ಒಂದೊಮ್ಮೆ ರಾಹುಲ್ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…