ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.
ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.
ಒಂದೊಮ್ಮೆ ರಾಹುಲ್ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…