ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.
ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.
ಒಂದೊಮ್ಮೆ ರಾಹುಲ್ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…