ರಾಹುಲ್ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ..:ವೀರಪ್ಪಮೊಯ್ಲಿ -Vishwanews24
ನೆಲಮಂಗಲ: ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡ.ಎಂ.ವೀರಪ್ಪಮೊಯ್ಲಿ ತಿಳಿಸಿದರು.
ಪಟ್ಟಣದ ಸಮೀಪದಲ್ಲಿರುವ ಯಲಹಂಕ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕಿತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಚುನಾವಣೆ ಪ್ರಚಾರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಬಡವರ ಉದ್ಧಾರ ಆಗಬೇಕೆಂದರೆ ಕಾಂಗ್ರೆಸ್ಗೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದರೆ ಬಡವರಿಗೆ ಅನುಕೂಲ ವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬಡ ಜನರ ಪರ ಕೆಲಸ ಮಾಡುತ್ತಿಲ್ಲ, ಅವರು ಶ್ರೀಮಂತರ ಪರ ಕೆಲಸ ಮಾಡುತ್ತಿದ್ದಾರೆ. ಈ ದಿನ ನರೇಂದ್ರ ಮೋದಿಯವರ ಸರ್ಕಾರದಿಂದ ಎಲ್ಲಾ ರೀತಿಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಪ್ರಧಾನಿ ಮೋದಿ ಶಿಶುಪಾಲನಿದ್ದಂತೆ ರಾಹುಲ್ ಗಾಂಧಿ ಶ್ರೀಕೃಷ್ಣನಿದ್ದಂತೆ, ಹದಿನೆಂಟಕ್ಕೆ ಶಿಶುಪಾಲನ ಅಂತ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ಸದಸ್ಯ ನಾರಾಯಣಸ್ವಾಮಿ, ವಿಧಾನಪರಿಷತ್ ಮಾಜಿಸದಸ್ಯ ಇ.ಕೃಷ್ಣಪ್ಪ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್, ಚೊಕ್ಕನಹಳ್ಳಿ ವೆಂಕಟೇಶ್, ಚಂದ್ರಪ್ಪ, ಜೆಡಿಎಸ್ ಮುಖಂಡ ಎನ್.ಕೃಷ್ಣಪ್ಪ, ಜಿ.ಶಿವಕುಮಾರ್, ಕಾಂಗ್ರೆಸ್ ಮುಖಂಡ ಲಕ್ಷ್ಮಣಮೂರ್ತಿ, ಕೇಶವಮೂರ್ತಿ, ದಿಲೀಪ್ಕುಮಾರ್ ಮತ್ತಿತರರಿದ್ದರು.
