Featured

ರಾಹುಲ್‌ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ..:ವೀರಪ್ಪಮೊಯ್ಲಿ -Vishwanews24

ನೆಲಮಂಗಲ: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡ.ಎಂ.ವೀರಪ್ಪಮೊಯ್ಲಿ ತಿಳಿಸಿದರು.
ಪಟ್ಟಣದ ಸಮೀಪದಲ್ಲಿರುವ ಯಲಹಂಕ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕಿತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಚುನಾವಣೆ ಪ್ರಚಾರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಡವರ ಉದ್ಧಾರ ಆಗಬೇಕೆಂದರೆ ಕಾಂಗ್ರೆಸ್‌ಗೆ ಮತ ನೀಡಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಬಡವರಿಗೆ ಅನುಕೂಲ ವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬಡ ಜನರ ಪರ ಕೆಲಸ ಮಾಡುತ್ತಿಲ್ಲ, ಅವರು ಶ್ರೀಮಂತರ ಪರ ಕೆಲಸ ಮಾಡುತ್ತಿದ್ದಾರೆ. ಈ ದಿನ ನರೇಂದ್ರ ಮೋದಿಯವರ ಸರ್ಕಾರದಿಂದ ಎಲ್ಲಾ ರೀತಿಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಪ್ರಧಾನಿ ಮೋದಿ ಶಿಶುಪಾಲನಿದ್ದಂತೆ ರಾಹುಲ್‌ ಗಾಂಧಿ ಶ್ರೀಕೃಷ್ಣನಿದ್ದಂತೆ, ಹದಿನೆಂಟಕ್ಕೆ ಶಿಶುಪಾಲನ ಅಂತ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ಸದಸ್ಯ ನಾರಾಯಣಸ್ವಾಮಿ, ವಿಧಾನಪರಿಷತ್‌ ಮಾಜಿಸದಸ್ಯ ಇ.ಕೃಷ್ಣಪ್ಪ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್‌, ಚೊಕ್ಕನಹಳ್ಳಿ ವೆಂಕಟೇಶ್‌, ಚಂದ್ರಪ್ಪ, ಜೆಡಿಎಸ್‌ ಮುಖಂಡ ಎನ್‌.ಕೃಷ್ಣಪ್ಪ, ಜಿ.ಶಿವಕುಮಾರ್‌, ಕಾಂಗ್ರೆಸ್‌ ಮುಖಂಡ ಲಕ್ಷ್ಮಣಮೂರ್ತಿ, ಕೇಶವಮೂರ್ತಿ, ದಿಲೀಪ್‌ಕುಮಾರ್‌ ಮತ್ತಿತರರಿದ್ದರು.

 

Vishwa News 24

Recent Posts

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

7 minutes ago

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

15 minutes ago

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

29 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

42 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago